Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...