Homeಮುಖಪುಟಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ ಲಂಚ: ಗುಜರಾತ್‌ನ ಮಹಿಳಾ ಪಿಎಸ್‌ಐ ಬಂಧನ

ಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ ಲಂಚ: ಗುಜರಾತ್‌ನ ಮಹಿಳಾ ಪಿಎಸ್‌ಐ ಬಂಧನ

- Advertisement -
- Advertisement -

ಅತ್ಯಾಚಾರ ಆರೋಪಿಯ ಮೇಲೆ ಸಾಮಾಜಿಕ ವಿರೋಧಿ ಚಟುವಟಿಕೆ ತಡೆ ಕಾಯ್ದೆ ಹಾಕದೆ, 20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಗುಜರಾತ್‌ನ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್-ಪಶ್ಚಿಮ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಶ್ವೇತಾ ಜಡೇಜಾ ಅವರು ಕೆನಾಲ್ ಷಾ ಎಂಬಾತನ ಮೇಲೆ 2019 ರಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಷಾ ಸಹೋದರನಿಂದ 35 ಲಕ್ಷ ರೂ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆ ಕಾಯ್ದೆಯನ್ನು ಹಾಕದಿರಲು ಕೆನಾಲ್ ಷಾ ನಿಂದ ಹಣವನ್ನು ಕೋರಿದ್ದಾರೆ. ನಗರ ಅಪರಾಧ ಶಾಖೆ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್) ಪ್ರಕಾರ, ಜಡೇಜಾ ಮಧ್ಯವರ್ತಿಯೊಬ್ಬರ ಮೂಲಕ 20 ಲಕ್ಷ ರೂ. ಸ್ವೀಕರಿಸಿದ್ದಾರೆ. ಅಲ್ಲದೇ ಅತ್ಯಾಚಾರ ಪ್ರಕರಣದ ಆರೋಪಿಯಿಂದ ಹೆಚ್ಚುವರಿ 15 ಲಕ್ಷ ರೂಗಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ.

ಫೆಬ್ರವರಿಯಲ್ಲಿ ಜಡೇಜಾಗೆ 20 ಲಕ್ಷ ರೂ. ನೀಡಿದ್ದ ಷಾ ಸಹೋದರ ಉಳಿದ ಮೊತ್ತವನ್ನು ಪಾವತಿಸುವಂತೆ ಸಬ್ ಇನ್ಸ್‌ಪೆಕ್ಟರ್‌ ಒತ್ತಾಯಿಸುತ್ತಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಎಫ್‌ಐಆರ್ ತಿಳಿಸಿದೆ.

ಆರೋಪಿ ಶ್ವೇತಾ ಜಡೇಜಾಳನ್ನು ಶುಕ್ರವಾರ ಬಂಧಿಸಲಾಗಿದ್ದು, ಆಕೆಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕೆಯನ್ನು ಶನಿವಾರ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಅಲ್ಲಿ ನ್ಯಾಯಾಧೀಶರು ಅವಳನ್ನು ಮೂರು ದಿನಗಳವರೆಗೆ ಪೊಲೀಸ್ ಬಂಧನಕ್ಕೆ ಕಳಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸುಧೀರ್ ಬ್ರಹ್ಮಭಟ್ ಹೇಳಿದ್ದಾರೆ.

“ಆರೋಪಿಯು ಸ್ವೀಕರಿಸಿದ 20 ಲಕ್ಷ ರೂಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಲಂಚದ ಹಣವನ್ನು ಮಧ್ಯವರ್ತಿ ಶ್ವೇತಾ ಜಡೇಜಾಳಿಗೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಪ್ರಾಸಿಕ್ಯೂಟರ್ ಹೇಳಿದ್ದಾರೆ.

ಷಾ ಅಹಮದಾಬಾದ್‌ನ ಬೆಳೆ ಪರಿಹಾರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ರ ಅಡಿಯಲ್ಲಿ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಅದರಲ್ಲಿ ಒಂದನ್ನು ಜಡೇಜಾ ತನಿಖೆ ನಡೆಸುತ್ತಿದ್ದರು.


ಇದನ್ನೂ ಓದಿ: ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...