Homeಮುಖಪುಟಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ ಲಂಚ: ಗುಜರಾತ್‌ನ ಮಹಿಳಾ ಪಿಎಸ್‌ಐ ಬಂಧನ

ಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ ಲಂಚ: ಗುಜರಾತ್‌ನ ಮಹಿಳಾ ಪಿಎಸ್‌ಐ ಬಂಧನ

- Advertisement -
- Advertisement -

ಅತ್ಯಾಚಾರ ಆರೋಪಿಯ ಮೇಲೆ ಸಾಮಾಜಿಕ ವಿರೋಧಿ ಚಟುವಟಿಕೆ ತಡೆ ಕಾಯ್ದೆ ಹಾಕದೆ, 20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಗುಜರಾತ್‌ನ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್-ಪಶ್ಚಿಮ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಶ್ವೇತಾ ಜಡೇಜಾ ಅವರು ಕೆನಾಲ್ ಷಾ ಎಂಬಾತನ ಮೇಲೆ 2019 ರಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಷಾ ಸಹೋದರನಿಂದ 35 ಲಕ್ಷ ರೂ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆ ಕಾಯ್ದೆಯನ್ನು ಹಾಕದಿರಲು ಕೆನಾಲ್ ಷಾ ನಿಂದ ಹಣವನ್ನು ಕೋರಿದ್ದಾರೆ. ನಗರ ಅಪರಾಧ ಶಾಖೆ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್) ಪ್ರಕಾರ, ಜಡೇಜಾ ಮಧ್ಯವರ್ತಿಯೊಬ್ಬರ ಮೂಲಕ 20 ಲಕ್ಷ ರೂ. ಸ್ವೀಕರಿಸಿದ್ದಾರೆ. ಅಲ್ಲದೇ ಅತ್ಯಾಚಾರ ಪ್ರಕರಣದ ಆರೋಪಿಯಿಂದ ಹೆಚ್ಚುವರಿ 15 ಲಕ್ಷ ರೂಗಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ.

ಫೆಬ್ರವರಿಯಲ್ಲಿ ಜಡೇಜಾಗೆ 20 ಲಕ್ಷ ರೂ. ನೀಡಿದ್ದ ಷಾ ಸಹೋದರ ಉಳಿದ ಮೊತ್ತವನ್ನು ಪಾವತಿಸುವಂತೆ ಸಬ್ ಇನ್ಸ್‌ಪೆಕ್ಟರ್‌ ಒತ್ತಾಯಿಸುತ್ತಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಎಫ್‌ಐಆರ್ ತಿಳಿಸಿದೆ.

ಆರೋಪಿ ಶ್ವೇತಾ ಜಡೇಜಾಳನ್ನು ಶುಕ್ರವಾರ ಬಂಧಿಸಲಾಗಿದ್ದು, ಆಕೆಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕೆಯನ್ನು ಶನಿವಾರ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಅಲ್ಲಿ ನ್ಯಾಯಾಧೀಶರು ಅವಳನ್ನು ಮೂರು ದಿನಗಳವರೆಗೆ ಪೊಲೀಸ್ ಬಂಧನಕ್ಕೆ ಕಳಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸುಧೀರ್ ಬ್ರಹ್ಮಭಟ್ ಹೇಳಿದ್ದಾರೆ.

“ಆರೋಪಿಯು ಸ್ವೀಕರಿಸಿದ 20 ಲಕ್ಷ ರೂಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಲಂಚದ ಹಣವನ್ನು ಮಧ್ಯವರ್ತಿ ಶ್ವೇತಾ ಜಡೇಜಾಳಿಗೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಪ್ರಾಸಿಕ್ಯೂಟರ್ ಹೇಳಿದ್ದಾರೆ.

ಷಾ ಅಹಮದಾಬಾದ್‌ನ ಬೆಳೆ ಪರಿಹಾರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ರ ಅಡಿಯಲ್ಲಿ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಅದರಲ್ಲಿ ಒಂದನ್ನು ಜಡೇಜಾ ತನಿಖೆ ನಡೆಸುತ್ತಿದ್ದರು.


ಇದನ್ನೂ ಓದಿ: ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...