Homeಮುಖಪುಟಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

ಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

- Advertisement -
- Advertisement -

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ (ಪಿಎಂ ಜಯ್ ಆಯುಷ್ಮಾನ್ ಭಾರತ್) ಯೋಜನೆ ಅಡಿಯಲ್ಲಿ ನಿಯಮಗಳನ್ನು ಪಾಲಿಸದ 55 ಆಸ್ಪತ್ರೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಸೋಮವಾರ ಒಪ್ಪಿಕೊಂಡಿದೆ. 32 ಆಸ್ಪತ್ರೆಗಳನ್ನು 2023 ರಲ್ಲಿ ಮತ್ತು 23 ಆಸ್ಪತ್ರೆಗಳನ್ನು 2024 ರಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಅವರ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕ್ರಮ ಎದುರಿಸಿದ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲು 19 ಆಸ್ಪತ್ರೆಗಳು ಮತ್ತೆ ಅನುಮೋದನೆ ಪಡೆದಿವೆ ಎಂದು ಬಹಿರಂಗಪಡಿಸಿದೆ. ಗುಜರಾತ್‌

ಪಿಎಂ ಜಯ್ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾದ ಅಥವಾ ಕಪ್ಪುಪಟ್ಟಿಗೆ ಸೇರಿಸಲಾದ ಆಸ್ಪತ್ರೆಗಳ ಸಂಖ್ಯೆಯ ಬಗ್ಗೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಸೋಮವಾರ ಗುಜರಾತ್ ಸರ್ಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ 31, 2024 ರ ಹೊತ್ತಿಗೆ 55 ಆಸ್ಪತ್ರೆಗಳು ಕ್ರಮವನ್ನು ಎದುರಿಸಿವೆ ಎಂದು ಸರ್ಕಾರ ಒಪ್ಪಿಕೊಂಡಿತು.

2024 ರಲ್ಲಿ, ಅಗ್ನಿಶಾಮಕ ಸುರಕ್ಷತೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮತ್ತು ಯೋಜನೆಯ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಸರ್ಕಾರ ಡಿಸೆಂಬರ್ 5 ರಂದು ಅರಾವಳಿ ಜಿಲ್ಲೆಯ ಶ್ರೀ ಜಲರಾಮ್ ಮಕ್ಕಳ ಆಸ್ಪತ್ರೆಯನ್ನು ಸ್ಥಗಿತಗೊಳಿಸಿತ್ತು. ಆದಾಗ್ಯೂ, ಕೇವಲ 25 ದಿನಗಳ ನಂತರ, ಅನುಸರಣೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಆಸ್ಪತ್ರೆಯ ಪುನರಾರಂಭಕ್ಕೆ ಅನುಮತಿ ನೀಡಿದೆ.

ಅದೇ ರೀತಿ, 2023 ರಲ್ಲಿ, ಇತರ 18 ಆಸ್ಪತ್ರೆಗಳು ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿಸಲಾಗಿತ್ತು. ಈ ಆಸ್ಪತ್ರೆಗಳು ಈ ಹಿಂದಿನ ಉಲ್ಲಂಘನೆಗಳನ್ನು ಸರಿಪಡಿಸಿದ್ದು, ಈಗ ನಿಯಮಗಳಿಗೆ ಬದ್ಧವಾಗಿವೆ ಎಂದು ಸರ್ಕಾರವು ಪ್ರತಿಪಾದಿಸುವ ಮೂಲಕ ತಮ್ಮ ಪುನಃಸ್ಥಾಪನೆಯನ್ನು ಸಮರ್ಥಿಸಿಕೊಂಡಿದೆ.

ಕಳೆದ ಎರಡು ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳಪೆ ಪ್ರದರ್ಶನ ನೀಡುವ ಅಧಿಕಾರಿಗಳನ್ನು ಪರಿಶೀಲಿಸುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಪರಿಶೀಲನೆಯ ಕಾರಣಕ್ಕೆ ಈ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...