Homeಮುಖಪುಟಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

ಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

- Advertisement -
- Advertisement -

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ (ಪಿಎಂ ಜಯ್ ಆಯುಷ್ಮಾನ್ ಭಾರತ್) ಯೋಜನೆ ಅಡಿಯಲ್ಲಿ ನಿಯಮಗಳನ್ನು ಪಾಲಿಸದ 55 ಆಸ್ಪತ್ರೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಸೋಮವಾರ ಒಪ್ಪಿಕೊಂಡಿದೆ. 32 ಆಸ್ಪತ್ರೆಗಳನ್ನು 2023 ರಲ್ಲಿ ಮತ್ತು 23 ಆಸ್ಪತ್ರೆಗಳನ್ನು 2024 ರಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಅವರ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕ್ರಮ ಎದುರಿಸಿದ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲು 19 ಆಸ್ಪತ್ರೆಗಳು ಮತ್ತೆ ಅನುಮೋದನೆ ಪಡೆದಿವೆ ಎಂದು ಬಹಿರಂಗಪಡಿಸಿದೆ. ಗುಜರಾತ್‌

ಪಿಎಂ ಜಯ್ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾದ ಅಥವಾ ಕಪ್ಪುಪಟ್ಟಿಗೆ ಸೇರಿಸಲಾದ ಆಸ್ಪತ್ರೆಗಳ ಸಂಖ್ಯೆಯ ಬಗ್ಗೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಸೋಮವಾರ ಗುಜರಾತ್ ಸರ್ಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ 31, 2024 ರ ಹೊತ್ತಿಗೆ 55 ಆಸ್ಪತ್ರೆಗಳು ಕ್ರಮವನ್ನು ಎದುರಿಸಿವೆ ಎಂದು ಸರ್ಕಾರ ಒಪ್ಪಿಕೊಂಡಿತು.

2024 ರಲ್ಲಿ, ಅಗ್ನಿಶಾಮಕ ಸುರಕ್ಷತೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮತ್ತು ಯೋಜನೆಯ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಸರ್ಕಾರ ಡಿಸೆಂಬರ್ 5 ರಂದು ಅರಾವಳಿ ಜಿಲ್ಲೆಯ ಶ್ರೀ ಜಲರಾಮ್ ಮಕ್ಕಳ ಆಸ್ಪತ್ರೆಯನ್ನು ಸ್ಥಗಿತಗೊಳಿಸಿತ್ತು. ಆದಾಗ್ಯೂ, ಕೇವಲ 25 ದಿನಗಳ ನಂತರ, ಅನುಸರಣೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಆಸ್ಪತ್ರೆಯ ಪುನರಾರಂಭಕ್ಕೆ ಅನುಮತಿ ನೀಡಿದೆ.

ಅದೇ ರೀತಿ, 2023 ರಲ್ಲಿ, ಇತರ 18 ಆಸ್ಪತ್ರೆಗಳು ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿಸಲಾಗಿತ್ತು. ಈ ಆಸ್ಪತ್ರೆಗಳು ಈ ಹಿಂದಿನ ಉಲ್ಲಂಘನೆಗಳನ್ನು ಸರಿಪಡಿಸಿದ್ದು, ಈಗ ನಿಯಮಗಳಿಗೆ ಬದ್ಧವಾಗಿವೆ ಎಂದು ಸರ್ಕಾರವು ಪ್ರತಿಪಾದಿಸುವ ಮೂಲಕ ತಮ್ಮ ಪುನಃಸ್ಥಾಪನೆಯನ್ನು ಸಮರ್ಥಿಸಿಕೊಂಡಿದೆ.

ಕಳೆದ ಎರಡು ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳಪೆ ಪ್ರದರ್ಶನ ನೀಡುವ ಅಧಿಕಾರಿಗಳನ್ನು ಪರಿಶೀಲಿಸುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಪರಿಶೀಲನೆಯ ಕಾರಣಕ್ಕೆ ಈ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...