Homeಮುಖಪುಟಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

ಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

- Advertisement -
- Advertisement -

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ (ಪಿಎಂ ಜಯ್ ಆಯುಷ್ಮಾನ್ ಭಾರತ್) ಯೋಜನೆ ಅಡಿಯಲ್ಲಿ ನಿಯಮಗಳನ್ನು ಪಾಲಿಸದ 55 ಆಸ್ಪತ್ರೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಸೋಮವಾರ ಒಪ್ಪಿಕೊಂಡಿದೆ. 32 ಆಸ್ಪತ್ರೆಗಳನ್ನು 2023 ರಲ್ಲಿ ಮತ್ತು 23 ಆಸ್ಪತ್ರೆಗಳನ್ನು 2024 ರಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಅವರ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕ್ರಮ ಎದುರಿಸಿದ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲು 19 ಆಸ್ಪತ್ರೆಗಳು ಮತ್ತೆ ಅನುಮೋದನೆ ಪಡೆದಿವೆ ಎಂದು ಬಹಿರಂಗಪಡಿಸಿದೆ. ಗುಜರಾತ್‌

ಪಿಎಂ ಜಯ್ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾದ ಅಥವಾ ಕಪ್ಪುಪಟ್ಟಿಗೆ ಸೇರಿಸಲಾದ ಆಸ್ಪತ್ರೆಗಳ ಸಂಖ್ಯೆಯ ಬಗ್ಗೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಸೋಮವಾರ ಗುಜರಾತ್ ಸರ್ಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ 31, 2024 ರ ಹೊತ್ತಿಗೆ 55 ಆಸ್ಪತ್ರೆಗಳು ಕ್ರಮವನ್ನು ಎದುರಿಸಿವೆ ಎಂದು ಸರ್ಕಾರ ಒಪ್ಪಿಕೊಂಡಿತು.

2024 ರಲ್ಲಿ, ಅಗ್ನಿಶಾಮಕ ಸುರಕ್ಷತೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮತ್ತು ಯೋಜನೆಯ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಸರ್ಕಾರ ಡಿಸೆಂಬರ್ 5 ರಂದು ಅರಾವಳಿ ಜಿಲ್ಲೆಯ ಶ್ರೀ ಜಲರಾಮ್ ಮಕ್ಕಳ ಆಸ್ಪತ್ರೆಯನ್ನು ಸ್ಥಗಿತಗೊಳಿಸಿತ್ತು. ಆದಾಗ್ಯೂ, ಕೇವಲ 25 ದಿನಗಳ ನಂತರ, ಅನುಸರಣೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಆಸ್ಪತ್ರೆಯ ಪುನರಾರಂಭಕ್ಕೆ ಅನುಮತಿ ನೀಡಿದೆ.

ಅದೇ ರೀತಿ, 2023 ರಲ್ಲಿ, ಇತರ 18 ಆಸ್ಪತ್ರೆಗಳು ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿಸಲಾಗಿತ್ತು. ಈ ಆಸ್ಪತ್ರೆಗಳು ಈ ಹಿಂದಿನ ಉಲ್ಲಂಘನೆಗಳನ್ನು ಸರಿಪಡಿಸಿದ್ದು, ಈಗ ನಿಯಮಗಳಿಗೆ ಬದ್ಧವಾಗಿವೆ ಎಂದು ಸರ್ಕಾರವು ಪ್ರತಿಪಾದಿಸುವ ಮೂಲಕ ತಮ್ಮ ಪುನಃಸ್ಥಾಪನೆಯನ್ನು ಸಮರ್ಥಿಸಿಕೊಂಡಿದೆ.

ಕಳೆದ ಎರಡು ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳಪೆ ಪ್ರದರ್ಶನ ನೀಡುವ ಅಧಿಕಾರಿಗಳನ್ನು ಪರಿಶೀಲಿಸುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಪರಿಶೀಲನೆಯ ಕಾರಣಕ್ಕೆ ಈ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...