Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...