Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...