Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...