Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಗೆ ಹಾರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...