Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...