Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...