Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...