Homeಚಳವಳಿಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ... ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

- Advertisement -
- Advertisement -

ಜನವರಿ 5 ರಂದು ಗುಜರಾತ್‌ನ ಮೊಡಾಸಾದ ಸೈರಾ ಗ್ರಾಮದಲ್ಲಿ 19 ವರ್ಷದ ದಲಿತ ಬಾಲಕಿ ನೇತು ಹಾಕಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ನಂತರ ದಲಿತ ಸಮುದಾಯದ ಸಾವಿರಾರು ಜನ ಅಪರಾಧಿಗಳನ್ನು ಬಂಧಿಸುವಂತೆ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹುಡಗಿ ನಾಪತ್ತೆಯಾದ ಕೂಡಲೇ ಜನವರಿ 1 ರಂದು ಎಫ್‌ಐಆರ್ ದಾಖಲಿಸಬೇಕೆಂದು ಸಂಪರ್ಕಿಸಿದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದರೆಂದು ಆ ಹುಡುಗಿಯ ಕುಟುಂಬವೂ ಆರೋಪಿಸಿದೆ.

“ಅವಳು ನಾಪತ್ತೆಯಾದಾಗ, ಆಕೆಯ ತಂದೆ ದೂರು ನೀಡಲು ಹೋದರು. ಆದರೆ ಪೊಲೀಸರು ಅದನ್ನು ಸ್ವೀಕರಿಸಲಿಲ್ಲ. ಶವ ಪತ್ತೆಯಾದ ಎರಡು ದಿನಗಳ ತನಕ ಅವರು ಅತ್ಯಾಚಾರ ಎಫ್‌ಐಆರ್ ದಾಖಲಿಸಲಿಲ್ಲ” ಎಂದು ಬಾಲಕಿಯ ಚಿಕ್ಕಮ್ಮ ದೂರಿದ್ದಾರೆ.

ಸಾವಿಗೀಡಾಗಿರುವ ಬಾಲಕಿಯು ತನ್ನ ಸಹೋದರಿಯೊಂದಿಗೆ ಮೊಡಾಸಾಗೆ ಹೋಗಿದ್ದಳು. ಆದರೆ ಹಿಂದಿರುಗುವಾಗ ಬಿಮಲ್ ಭರದ್ ಎಂಬ ವ್ಯಕ್ತಿ ಆಕೆಯನ್ನು ಬಲವಂತವಾಗಿ ತನ್ನ ಕಾರಿಗೆ ಎತ್ತಿಹಾಕಿಕೊಂಡಿದ್ದನ್ನು ನೋಡಿದ್ದಾಗಿಯೂ, ಅದರ ಬಗ್ಗೆ ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾಗಿಯೂ ಬಾಲಕಿಯ ಸಹೋದರಿ ಬಹಿರಂಗಪಡಿಸಿದ್ದಾಳೆ. ಅಲ್ಲಿಯ ಸಹಕಾರಿ ಗಿರಣಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ದೃಢಪಡಿಸಿವೆ ಎನ್ನಲಾಗಿದೆ.

ಸಿಸಿಟಿವಿಯ ಫೂಟೇಜ್‌ನಲ್ಲಿ ಸೆರೆಯಾಗಿರುವ ಕಾರನ್ನು ಬಿಮಲ್ ತಂದೆ ಭಾರತ್ ಭರದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರನ್ನು ತನ್ನ ಮೂವರು ಸ್ನೇಹಿತರಾದ ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ತೆಗೆದುಕೊಂಡಿದ್ದಾರೆ ಎಂದು ಬಿಮಲ್ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದ.

ಜನವರಿ 3 ರಂದು ಮೊಡಾಸಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಎನ್.ಕೆ.ರಬಾರಿಯು “ಬಾಲಕಿಯು ತನ್ನ ಸಮುದಾಯದ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಮತ್ತು ಹಿಂತಿರುಗಿ ಬರುತ್ತಾಳೆ ಎಂದು ಬಾಲಕಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಆದರೆ ಮರುದಿನವೇ, ರಬಾರಿ ಈ ವಿಷಯವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಬಲ್ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಬಾಲಕಿಯ ಕುಟುಂಬಕ್ಕೆ ತಿಳಿಸಿದ್ದಾರೆ.

ಜನವರಿ 5 ರಂದು, ಹಳ್ಳಿಯ ಪಾದ್ರಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವ ಬಾಲಕಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಬಾಲಕಿಯ ಅಜ್ಜ ಗುರುತಿಸಿದ್ದಾರೆ.

ಜನವರಿ 7 ರಂದು, ಬಾಲಕಿಯ ಅಜ್ಜ ಬಿಮಾಲ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಆಕೆಯ ಶವವನ್ನು ಮಂಗಳವಾರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಯಿತು. ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ರಬರಿಯನ್ನು ಅಮಾನತುಗೊಳಿಸುವವರೆಗೂ ಮತ್ತು ಆರೋಪಿಗಳನ್ನು ಬಂಧಿಸುವವರೆಗೆ ಕುಟುಂಬವು ಆಕೆಯ ದೇಹವನ್ನು ಸ್ವೀಕರಿಸಲು ನಿರಾಕರಿಸಿತು.

“ಪ್ರತಿಭಟನಾಕಾರರು ನನ್ನನ್ನು ಭೇಟಿಯಾಗಿ ಮರಣೋತ್ತರ ವರದಿಯ ಪ್ರತಿಯನ್ನು ಕೋರಿದರು. ಅವರ ಭಾವನೆಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಈ ನಡುವೆ ಆಸ್ಪತ್ರೆಯಲ್ಲಿ ಬುಧವಾರ ಪ್ಯಾನಲ್ ಮರಣೋತ್ತರ ಪರೀಕ್ಷೆ ನಡೆಸಲಾಯಿತು” ಎಂದು ಆಸ್ಪತ್ರೆಯ ಅಧೀಕ್ಷಕ ಗುನ್ವಂತ್ ರಾಥೋಡ್ ಹೇಳಿದ್ದಾರೆ.

ಈ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. “ನಮಗೆ ಎರಡು ಬೇಡಿಕೆಗಳಿವೆ. ಈ ಭೀಕರ ಅಪರಾಧದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಬೇಕು. ಆಗ ಮಾತ್ರ ಕುಟುಂಬವು ದೇಹವನ್ನು ಸ್ವೀಕರಿಸುತ್ತದೆ” ಎಂದು ದಲಿತ ಕಾರ್ಯಕರ್ತ ಕೀರ್ತಿ ರಾಥೋಡ್ ಹೇಳಿದ್ದಾರೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಎಸ್‌ಎಸ್ಟಿ ಅಟ್ರಾಸಿಟಿ ಸೇರಿದಂತೆ ಹಲವು ಕೇಸುಗಳನ್ನು ಆರೋಪಿಗಳ ಮೇಲೆ ದಾಖಲಿಸಿದ್ದಾರೆ. ಗುಜರಾತ್‌ನ ಎಸ್‌ಸಿ /ಎಸ್‌ಟಿ ಸೆಲ್‌ನ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕೆಕೆ ಓಜಾ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. “ನಾವು ಸಾಧ್ಯವಾದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ಪೊಲೀಸ್ ಉಪಅಧೀಕ್ಷಕರಿಗೆ ಸೂಚಿಸಿದ್ದೇವೆ. ಮತ್ತು ಈ ವಿಷಯದಲ್ಲಿ ಪೊಲೀಸರ ಕಡೆಯಿಂದ ನಿಜವಾಗಿಯೂ ನಿರ್ಲಕ್ಷ್ಯವಿದೆಯೇ ಎಂದು ನಾವು ಇಲಾಖಾ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಓಜಾ ಹೇಳಿದರು. ತದನಂತರ ಬಾಲಕಿಯ ಶವಸಂಸ್ಕಾರ ನೆರವೇರಿಸಲಾಗಿದೆ.

ಅದು ಉನಾ ಘಟನೆಯಾಗಿರಲಿ, ಭಾನುಭಾಯ್ ವಂಕರ್ ಅವರ ಆತ್ಮಹತ್ಯೆಯಾಗಲಿ ಅಥವಾ ಈ ಮಗಳ ಮೇಲೆ ಅತ್ಯಾಚಾರ ಮತ್ತು ಹತ್ಯೆಯಾಗಲಿ, ದಲಿತ ಸಮಾಜವನ್ನು ಸುರಕ್ಷಿತವಾಗಿಸಲು ಗುಜರಾತ್ ಸರ್ಕಾರ ಎಂದಿಗೂ ಪ್ರಯತ್ನಿಸುವುದಿಲ್ಲ. ದಲಿತರಿಗೆ ಅವರ ಜಮೀನು ಇಲ್ಲ, ಗೌರವವೂ ಸಿಗಲಿಲ್ಲ! ಈಗ ಜಗಳ ರಸ್ತೆಯಲ್ಲಿದೆ.. ಎಂದು ಶಾಸಕ ಜಿಗ್ನೇಶ್‌ ಮೇವಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಅರಾವಳ್ಳಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ನೋಟಿಸ್ ನೀಡಿದೆ.

“ತುಳಿತಕ್ಕೊಳಗಾದ ಬಹುಜನ ಮಗಳ ಬಲಿಪಶುವಾಗಿದ್ದರೆ ಎಲ್ಲಾ ಸ್ತ್ರೀವಾದಿ ಜಾತ್ಯತೀತ ಮತ್ತು ಪ್ರಗತಿಪರ ಜನರು ಜಾತಿಯನ್ನು ನೋಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಯಾವುದೇ ಕ್ಯಾಂಡಲ್ ಮೆರವಣಿಗೆ ಬರುವುದಿಲ್ಲ. ಇದು ಎಲ್ಲವೂ ಜಾತಿಯ ವಿಷಯವಾಗಿದೆ” ಎಂದು ಭೀಮ್‌ ಆರ್ಮಿಯ ಖುಷ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆ ಬಾಲಕಿಯ ನ್ಯಾಯಕ್ಕಾಗಿ ಆಂದೋಲನ ಆರಂಭವಾಗಿದೆ. ಆರೋಪಿಗಳು ಯಾರೆಂದು ಸ್ಪಷ್ಟವಾಗಿ ಗೊತ್ತಿದ್ದರೂ ಇನ್ನು ಬಂಧನವಾಗಿಲ್ಲ. ಅದಕ್ಕಿಂತ ಹೆಚ್ಚು ಪೊಲೀಸರು ಸರಿಯಾಗಿ ತಮ್ಮ ಕೆಲಸ ಮಾಡಿದ್ದರೆ ಬಾಲಕಿಯನ್ನು ರಕ್ಷಿಸಬಹುದಿತ್ತು. ಆದರೆ ಅದು ದಲಿತ ಬಾಲಕಿ ಎಂಬ ಕಾರಣಕ್ಕೆ ಆಗಲಿಲ್ಲ. ಇಲ್ಲಿ ಪೊಲೀಸರೆ ಆರೋಪಿಗಳಾಗಿದ್ದಾರೆ. ಹೈದರಾಬಾದ್‌ ಎನ್‌ಕೌಂಟರ್‌ ಅನ್ನು ಸಂಭ್ರಮಿಸಿದವರು ಏಕೆ ಬಾಯಿ ಮುಚ್ಚಿ ಕುಳಿತಿದ್ದಾರೆ? ಎನ್‌ಕೌಂಟರ್‌, ಮರಣದಂಡನೆ ಪರಿಹಾರವಾಗಿದ್ದರೆ ಏಕೆ ಮತ್ತೆ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...