Homeಮುಖಪುಟಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 (MGNREGA) ಗೆ ಸಂಬಂಧಿಸಿದ ಹಗರಣಗಳಲ್ಲಿ ಇತ್ತೀಚಿನ ಉದಾಹರಣೆಯಾಗಿ ನಾಲ್ಕು ವರ್ಷದ ಹಿಂದೆ ಮೃತಪಟ್ಟವರಿಗೆ ಉದ್ಯೋಗ ಕಾರ್ಡ್ ನೀಡಿ, ವೇತನ ನೀಡಿರುವುದು ಪತ್ತೆಯಾಗಿದೆ.

ಗುಜರಾತ್‌ನ ಛೋಟ್ಟಾ ಉದಯಪುರ ಜಿಲ್ಲೆಯ ಬೊಡೆಲಿ ತಹಸಿಲ್ ಎಂಬ ವ್ಯಕ್ತಿ ನಿಧನರಾಗಿ ನಾಲ್ಕು ವರ್ಷಗಳು ಸಂದಿವೆ. ಆದರೆ ಇವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಕಾರ್ಡ್ ನೀಡಲಾಗಿದೆ. ಜೊತೆಗೆ ಕೆಲಸ ಮಾಡಿರುವುದಕ್ಕಾಗಿ ವೇತನವನ್ನುಅವರ ಖಾತೆಗೆ  ಪಾವತಿಸಲಾಗಿದೆ ಎಂಬುದು ಬೆಳಕಿಗೆ ಬಂದಿದೆ.

ಈ ಹಗರಣವನ್ನು ಸ್ಥಳೀಯ ಶಾಸಕ ಮೋಹನ್‌ಸಿನ್ಹ್ ರಾಥ್ವಾ ಗುಜರಾತ್ ರಾಜ್ಯ ವಿಧಾನಸಭೆಯಲ್ಲಿ ಬೆಳಕಿಗೆ ತಂದಿದ್ದಾರೆ. ಇದನ್ನು ಗುಜರಾತ್ ಕೃಷಿ ಸಚಿವರು ಸಹ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ಉದ್ಯೋಗ ಖಾತ್ರಿ ಯೋಜನೆಯಡಿ ವೇತನ ಪಾವತಿಗೆ ಸಂಬಂಧಿಸಿದ ಹಗರಣಗಳು ಗುಜರಾತ್‌ನಲ್ಲಿ ಮುಂದುವರೆದಿದೆ ಎಂದು ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮೋಹನ್‌ಸಿನ್ಹ್ ರಾಥ್ವಾ,  ತಮ್ಮ ಕ್ಷೇತ್ರವಾದ ಛೋಟ್ಟಾ ಉದಯಪುರದ ಹಲವಾರು ಅಕ್ರಮಗಳನ್ನು ಪ್ರಸ್ತಾಪಿಸಿದ್ದಾರೆ. ಎಂಜಿಎನ್‌ಆರ್‌ಇಜಿಎ ದಾಖಲೆಗಳಲ್ಲಿ, ಅಪ್ರಾಪ್ತ ವಯಸ್ಕರಿಗೆ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ ಸಹ ಅನೇಕ ಬಾರಿ ವೇತನ ಪಾವತಿ ಮಾಡಲಾಗಿದೆ ಎಂದು ಸದನದಲ್ಲಿ ತಿಳಿಸಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನಿಧನರಾದ ವ್ಯಕ್ತಿಯೊಬ್ಬನಿಗೆ ಪಾವತಿ ಮಾಡಲಾಗಿದೆ. ಅದೇ ರೀತಿ, ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಸಿಂಹ ರಾಥ್ವಾ ಅವರಿಗೆ ಈ ಯೋಜನೆಯಡಿ 1,120 ರೂ. ನೀಡಲಾಗಿದೆ. ಜಿಇಬಿಯಲ್ಲಿ ಕೆಲಸ ಮಾಡುತ್ತಿರುವ ಅಶ್ವಿನ್ ರಾಥ್ವಾ ಅವರಿಗೆ 1,120 ರೂ. ನೀಡಲಾಗಿದೆ. ಇಂತಹ ಘಟನೆಗಳು ಈ ಹಗರಣದಲ್ಲಿ ಅನೇಕ ಕಂಡುಬಂದಿವೆ” ಎಂದಿದ್ದಾರೆ.

ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳಿಗೆ ಅನೇಕ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ವಿಧಾನಸಭೆಯ ಹಿರಿಯ ಶಾಸಕರು ಹೇಳಿದ್ದಾರೆ. “ಹಗರಣದ ಮತ್ತೊಂದು ದುರಂತವೆಂದರೆ, 13 ವರ್ಷದ ಮತ್ತು 15 ವರ್ಷದ ಮಕ್ಕಳನ್ನು ಸಹ ಫಲಾನುಭವಿಗಳೆಂದು ತೋರಿಸಲಾಗಿದೆ ಮತ್ತು 1,120 ರೂ.ಗಳ ಪಾವತಿಯನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಸಚಿವ ಆರ್.ಸಿ.ಫಾಲ್ಡು, ಶಾಸಕ ಮೋಹನ್‌ಸಿನ್ಹ್ ರಾಥ್ವಾ ಅವರ ಆರೋಪ ಮತ್ತು ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಒಪ್ಪಿಕೊಂಡಿದ್ದಾರೆ. “ಪಾವತಿಯಲ್ಲಿ ಕೆಲವು ಅಕ್ರಮಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು 2020 ರಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೆಲವು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...