Homeಮುಖಪುಟಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು ಎಂದಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮವು ಮುಂಬೈನಲ್ಲಿ ವೈರಸ್‌ ದೊಡ್ಡ ಮಟ್ಟದಲ್ಲಿ ಹರಡಲು ಕಾರಣವಾಗಿದೆ ಎಂದು ಸಂಸದ ಮತ್ತು ಶಿವಸೇನೆ ಮುಖಂಡ ಸಂಜಯ್ ರಾವತ್ ರೋಪಿಸಿದ್ದಾರೆ.

ಯಾವುದೇ ಪೂರ್ವ ಯೋಜನೆ ಇಲ್ಲದೆ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ಕಿಡಿಕಾರಿರುವ ಅವರು, ಘೋಷಿಸಿದ್ದು ಕೇಂದ್ರ ಸರ್ಕಾರ, ಆದರೆ ಈಗ ನಿರ್ಬಂಧಗಳನ್ನು ತೆಗೆದುಹಾಕುವ ಜವಾಬ್ದಾರಿಯನ್ನು ರಾಜ್ಯಗಳಿಗೆ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗುಜರಾತ್‌ನಲ್ಲಿ ಕರೋನವೈರಸ್ ಹರಡುವಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ನಡೆದ ಬೃಹತ್ ಸಾರ್ವಜನಿಕ ಸಭೆಯೇ ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಟ್ರಂಪ್ ಅವರೊಂದಿಗೆ ಬಂದ ಕೆಲವು ಪ್ರತಿನಿಧಿಗಳು ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಿದ್ದು ಇದು ಇಲ್ಲಿಯೂ ಸಹ ಹರಡಲು ಕಾರಣವಾಯಿತು” ಎಂದು ಸಂಜಯ್ ರಾವತ್‌ ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಫೆಬ್ರವರಿ 24 ರಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಹಮದಾಬಾದ್‌ನಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಒಂದು ಸಾವಿರಾರು ಜನರು ಭಾಗವಹಿಸಿದ್ದರು. ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ನಡೆಸುತ್ತಿರುವ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದ ಸಭೆಯನ್ನು ಉದ್ದೇಶಿಸಿ ಉಭಯ ನಾಯಕರು ಮಾತನಾಡಿದ್ದರು.

ಮಾರ್ಚ್ 20 ರಂದು ಗುಜರಾತ್ ತನ್ನ ಮೊದಲ ಕರೋನವೈರಸ್ ಪ್ರಕರಣಗಳನ್ನು ವರದಿ ಮಾಡಿತ್ತು. ರಾಜ್‌ಕೋಟ್‌ನ ಪುರುಷ ಮತ್ತು ಸೂರತ್‌ನ ಮಹಿಳೆಯ ಮಾದರಿಗಳು ಈ ರೋಗಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದವು. ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಕೆಳಗಿಳಿಸಲು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವ ಬಿಜೆಪಿಯ ಯಾವುದೇ ಕ್ರಮವು ಆತ್ಮಹತ್ಯೆಗೆ ಸಮಯ ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

“ಕೇವಲ ಆರು ತಿಂಗಳ ಹಿಂದೆ ರಾಷ್ಟ್ರಪತಿಗಳ ಆಡಳಿತವನ್ನು ಹೇಗೆ ವಿಧಿಸಲಾಯಿತು ಮತ್ತು ಕೊನೆಗೆ ತೆಗೆದುಹಾಕಬೇಕಾಯಿತು ಎಂಬುದಕ್ಕೆ ರಾಜ್ಯವು ಸಾಕ್ಷಿಯಾಗಿದೆ” ಎಂದು ಅವರು ತಮ್ಮ ಸರ್ಕಾರ ರಚನೆಯ ಸಂದರ್ಭ ಮತ್ತು ಬಿಜೆಪಿಗಾದ ಮುಖಭಂಗವನ್ನು ನೆನಪಿಸಿದ್ದಾರೆ.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಕೆಳಗಿಳಿಸಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸಿದರೂ, ಅದರ ಉಳಿವು ಮೂರೂ ಆಡಳಿತ ಮಿತ್ರಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಸಂಜಯ್‌ ರಾವತ್‌ ಹೇಳಿದ್ದಾರೆ.

“ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು. ವೈರಸ್ ವಿರುದ್ಧ ಹೋರಾಡಲು ಯಾವುದೇ ಯೋಜನೆ ಇಲ್ಲದ ಕಾರಣ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸಲು ಕೇಂದ್ರ ಸರ್ಕಾರವೂ ವಿಫಲವಾಗಿದೆ” ಅವರು ಹೇಳಿದ್ದಾರೆ.

ಲಾಕ್‌ಡೌನ್ ಹೇಗೆ ವಿಫಲವಾಗಿದೆ ಎಂಬುದರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅತ್ಯುತ್ತಮ ವಿಶ್ಲೇಷಣೆ ಮಾಡಿದ್ದಾರೆ ಎಂದು ಸಹ ಅದೇ ಲೇಖನದಲ್ಲಿ ಸಂಜಯ್ ರಾವತ್‌ ಹೇಳಿದ್ದಾರೆ.


ಇದನ್ನೂ ಓದಿ: ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...