Homeಮುಖಪುಟಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು ಎಂದಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮವು ಮುಂಬೈನಲ್ಲಿ ವೈರಸ್‌ ದೊಡ್ಡ ಮಟ್ಟದಲ್ಲಿ ಹರಡಲು ಕಾರಣವಾಗಿದೆ ಎಂದು ಸಂಸದ ಮತ್ತು ಶಿವಸೇನೆ ಮುಖಂಡ ಸಂಜಯ್ ರಾವತ್ ರೋಪಿಸಿದ್ದಾರೆ.

ಯಾವುದೇ ಪೂರ್ವ ಯೋಜನೆ ಇಲ್ಲದೆ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ಕಿಡಿಕಾರಿರುವ ಅವರು, ಘೋಷಿಸಿದ್ದು ಕೇಂದ್ರ ಸರ್ಕಾರ, ಆದರೆ ಈಗ ನಿರ್ಬಂಧಗಳನ್ನು ತೆಗೆದುಹಾಕುವ ಜವಾಬ್ದಾರಿಯನ್ನು ರಾಜ್ಯಗಳಿಗೆ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗುಜರಾತ್‌ನಲ್ಲಿ ಕರೋನವೈರಸ್ ಹರಡುವಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ನಡೆದ ಬೃಹತ್ ಸಾರ್ವಜನಿಕ ಸಭೆಯೇ ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಟ್ರಂಪ್ ಅವರೊಂದಿಗೆ ಬಂದ ಕೆಲವು ಪ್ರತಿನಿಧಿಗಳು ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಿದ್ದು ಇದು ಇಲ್ಲಿಯೂ ಸಹ ಹರಡಲು ಕಾರಣವಾಯಿತು” ಎಂದು ಸಂಜಯ್ ರಾವತ್‌ ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಫೆಬ್ರವರಿ 24 ರಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಹಮದಾಬಾದ್‌ನಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಒಂದು ಸಾವಿರಾರು ಜನರು ಭಾಗವಹಿಸಿದ್ದರು. ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ನಡೆಸುತ್ತಿರುವ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದ ಸಭೆಯನ್ನು ಉದ್ದೇಶಿಸಿ ಉಭಯ ನಾಯಕರು ಮಾತನಾಡಿದ್ದರು.

ಮಾರ್ಚ್ 20 ರಂದು ಗುಜರಾತ್ ತನ್ನ ಮೊದಲ ಕರೋನವೈರಸ್ ಪ್ರಕರಣಗಳನ್ನು ವರದಿ ಮಾಡಿತ್ತು. ರಾಜ್‌ಕೋಟ್‌ನ ಪುರುಷ ಮತ್ತು ಸೂರತ್‌ನ ಮಹಿಳೆಯ ಮಾದರಿಗಳು ಈ ರೋಗಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದವು. ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಕೆಳಗಿಳಿಸಲು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವ ಬಿಜೆಪಿಯ ಯಾವುದೇ ಕ್ರಮವು ಆತ್ಮಹತ್ಯೆಗೆ ಸಮಯ ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

“ಕೇವಲ ಆರು ತಿಂಗಳ ಹಿಂದೆ ರಾಷ್ಟ್ರಪತಿಗಳ ಆಡಳಿತವನ್ನು ಹೇಗೆ ವಿಧಿಸಲಾಯಿತು ಮತ್ತು ಕೊನೆಗೆ ತೆಗೆದುಹಾಕಬೇಕಾಯಿತು ಎಂಬುದಕ್ಕೆ ರಾಜ್ಯವು ಸಾಕ್ಷಿಯಾಗಿದೆ” ಎಂದು ಅವರು ತಮ್ಮ ಸರ್ಕಾರ ರಚನೆಯ ಸಂದರ್ಭ ಮತ್ತು ಬಿಜೆಪಿಗಾದ ಮುಖಭಂಗವನ್ನು ನೆನಪಿಸಿದ್ದಾರೆ.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಕೆಳಗಿಳಿಸಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸಿದರೂ, ಅದರ ಉಳಿವು ಮೂರೂ ಆಡಳಿತ ಮಿತ್ರಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಸಂಜಯ್‌ ರಾವತ್‌ ಹೇಳಿದ್ದಾರೆ.

“ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು. ವೈರಸ್ ವಿರುದ್ಧ ಹೋರಾಡಲು ಯಾವುದೇ ಯೋಜನೆ ಇಲ್ಲದ ಕಾರಣ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸಲು ಕೇಂದ್ರ ಸರ್ಕಾರವೂ ವಿಫಲವಾಗಿದೆ” ಅವರು ಹೇಳಿದ್ದಾರೆ.

ಲಾಕ್‌ಡೌನ್ ಹೇಗೆ ವಿಫಲವಾಗಿದೆ ಎಂಬುದರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅತ್ಯುತ್ತಮ ವಿಶ್ಲೇಷಣೆ ಮಾಡಿದ್ದಾರೆ ಎಂದು ಸಹ ಅದೇ ಲೇಖನದಲ್ಲಿ ಸಂಜಯ್ ರಾವತ್‌ ಹೇಳಿದ್ದಾರೆ.


ಇದನ್ನೂ ಓದಿ: ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...