Homeಮುಖಪುಟಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು ಎಂದಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮವು ಮುಂಬೈನಲ್ಲಿ ವೈರಸ್‌ ದೊಡ್ಡ ಮಟ್ಟದಲ್ಲಿ ಹರಡಲು ಕಾರಣವಾಗಿದೆ ಎಂದು ಸಂಸದ ಮತ್ತು ಶಿವಸೇನೆ ಮುಖಂಡ ಸಂಜಯ್ ರಾವತ್ ರೋಪಿಸಿದ್ದಾರೆ.

ಯಾವುದೇ ಪೂರ್ವ ಯೋಜನೆ ಇಲ್ಲದೆ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ಕಿಡಿಕಾರಿರುವ ಅವರು, ಘೋಷಿಸಿದ್ದು ಕೇಂದ್ರ ಸರ್ಕಾರ, ಆದರೆ ಈಗ ನಿರ್ಬಂಧಗಳನ್ನು ತೆಗೆದುಹಾಕುವ ಜವಾಬ್ದಾರಿಯನ್ನು ರಾಜ್ಯಗಳಿಗೆ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗುಜರಾತ್‌ನಲ್ಲಿ ಕರೋನವೈರಸ್ ಹರಡುವಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ನಡೆದ ಬೃಹತ್ ಸಾರ್ವಜನಿಕ ಸಭೆಯೇ ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಟ್ರಂಪ್ ಅವರೊಂದಿಗೆ ಬಂದ ಕೆಲವು ಪ್ರತಿನಿಧಿಗಳು ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಿದ್ದು ಇದು ಇಲ್ಲಿಯೂ ಸಹ ಹರಡಲು ಕಾರಣವಾಯಿತು” ಎಂದು ಸಂಜಯ್ ರಾವತ್‌ ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಫೆಬ್ರವರಿ 24 ರಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಹಮದಾಬಾದ್‌ನಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಒಂದು ಸಾವಿರಾರು ಜನರು ಭಾಗವಹಿಸಿದ್ದರು. ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ನಡೆಸುತ್ತಿರುವ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದ ಸಭೆಯನ್ನು ಉದ್ದೇಶಿಸಿ ಉಭಯ ನಾಯಕರು ಮಾತನಾಡಿದ್ದರು.

ಮಾರ್ಚ್ 20 ರಂದು ಗುಜರಾತ್ ತನ್ನ ಮೊದಲ ಕರೋನವೈರಸ್ ಪ್ರಕರಣಗಳನ್ನು ವರದಿ ಮಾಡಿತ್ತು. ರಾಜ್‌ಕೋಟ್‌ನ ಪುರುಷ ಮತ್ತು ಸೂರತ್‌ನ ಮಹಿಳೆಯ ಮಾದರಿಗಳು ಈ ರೋಗಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದವು. ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಕೆಳಗಿಳಿಸಲು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವ ಬಿಜೆಪಿಯ ಯಾವುದೇ ಕ್ರಮವು ಆತ್ಮಹತ್ಯೆಗೆ ಸಮಯ ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

“ಕೇವಲ ಆರು ತಿಂಗಳ ಹಿಂದೆ ರಾಷ್ಟ್ರಪತಿಗಳ ಆಡಳಿತವನ್ನು ಹೇಗೆ ವಿಧಿಸಲಾಯಿತು ಮತ್ತು ಕೊನೆಗೆ ತೆಗೆದುಹಾಕಬೇಕಾಯಿತು ಎಂಬುದಕ್ಕೆ ರಾಜ್ಯವು ಸಾಕ್ಷಿಯಾಗಿದೆ” ಎಂದು ಅವರು ತಮ್ಮ ಸರ್ಕಾರ ರಚನೆಯ ಸಂದರ್ಭ ಮತ್ತು ಬಿಜೆಪಿಗಾದ ಮುಖಭಂಗವನ್ನು ನೆನಪಿಸಿದ್ದಾರೆ.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಕೆಳಗಿಳಿಸಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸಿದರೂ, ಅದರ ಉಳಿವು ಮೂರೂ ಆಡಳಿತ ಮಿತ್ರಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಸಂಜಯ್‌ ರಾವತ್‌ ಹೇಳಿದ್ದಾರೆ.

“ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು. ವೈರಸ್ ವಿರುದ್ಧ ಹೋರಾಡಲು ಯಾವುದೇ ಯೋಜನೆ ಇಲ್ಲದ ಕಾರಣ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸಲು ಕೇಂದ್ರ ಸರ್ಕಾರವೂ ವಿಫಲವಾಗಿದೆ” ಅವರು ಹೇಳಿದ್ದಾರೆ.

ಲಾಕ್‌ಡೌನ್ ಹೇಗೆ ವಿಫಲವಾಗಿದೆ ಎಂಬುದರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅತ್ಯುತ್ತಮ ವಿಶ್ಲೇಷಣೆ ಮಾಡಿದ್ದಾರೆ ಎಂದು ಸಹ ಅದೇ ಲೇಖನದಲ್ಲಿ ಸಂಜಯ್ ರಾವತ್‌ ಹೇಳಿದ್ದಾರೆ.


ಇದನ್ನೂ ಓದಿ: ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...