Homeಮುಖಪುಟಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

- Advertisement -
- Advertisement -

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಹುಲ್ ಗಾಂಧಿಯವರ ಈ ಸೂಕ್ಷ್ಮ ಹೇಳಿಕೆಗೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋ+-ಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...