Homeಮುಖಪುಟಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

- Advertisement -
- Advertisement -

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಹುಲ್ ಗಾಂಧಿಯವರ ಈ ಸೂಕ್ಷ್ಮ ಹೇಳಿಕೆಗೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋ+-ಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...