Homeಮುಖಪುಟಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

- Advertisement -
- Advertisement -

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಹುಲ್ ಗಾಂಧಿಯವರ ಈ ಸೂಕ್ಷ್ಮ ಹೇಳಿಕೆಗೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋ+-ಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...