Homeಮುಖಪುಟಆಸ್ಕರ್ ನಲ್ಲಿಯೂ 'ಅಪ್ನಾ ಟೈಮ್ ಆಯೇಗ' ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

ಆಸ್ಕರ್ ನಲ್ಲಿಯೂ ‘ಅಪ್ನಾ ಟೈಮ್ ಆಯೇಗ’ ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

- Advertisement -
- Advertisement -

ಜೋಯಾ ಅಖ್ತರ್ ಅವರ ಗಲ್ಲಿ ಬಾಯ್ ಹಿಂದಿ ಚಲನಚಿತ್ರವು ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಪ್ರವೇಶವಾಗಿದೆ.

ಜೋಯಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಈ ದೊಡ್ಡ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ.

“92 ನೇ ಆಸ್ಕರ್ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ಪ್ರವೇಶವಾಗಿ ಗಲ್ಲಿಬಾಯ್ ಆಯ್ಕೆಯಾಗಿದೆ #Apnatimeaayega” ಅಪ್ನಾ ಟೈಮ್ ಆಯೇಗ, (ನಮಗೂ ಸಮಯ ಬರುತ್ತೆ)  ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ಈ ಚಿತ್ರವು ಆಯುಷ್ಮಾನ್ ಖುರಾನಾ ಅಭಿನಯದ ಬದಾಯಿ ಹೋ ಮತ್ತು ಅಂಧಾದುನ್ ಚಿತ್ರಗಳ ಜೊತೆಗೆ ನಿಕಟ ಸ್ಪರ್ದೇಯ ನಂತರ ಆಸ್ಕರ್ ಗೆ ಪ್ರವೇಶಿಸಿದೆ ಎಂದು ಹೇಳಲಾಗುತ್ತಿದೆ.

ಗಲ್ಲಿ ಬಾಯ್ ರಾಪರ್ ನೇಜಿಯವರ ಜೀವನವನ್ನು ಆಧರಿಸಿದ ಕಥೆಯಾಗಿದ್ದು ಮುಂಬೈನ ಬೀದಿ ರಾಪ್ಪರ್‌ಗಳ ಕಥೆಯನ್ನು ಮನೋಜ್ಞವಾಗಿ ಹೇಳಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಕೂಡ ನಟಿಸಿದ್ದಾರೆ.

ಖ್ಯಾತ ನಟ-ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಈ ವರ್ಷದ ಆಯ್ಕೆ ಸಮಿತಿಯ ತೀರ್ಪುಗಾರರ ಮುಖ್ಯಸ್ಥರಾಗಿದ್ದರು. ಈ ಚಿತ್ರವು 92 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಇದುವರೆಗೂ ಯಾವುದೇ ಭಾರತೀಯ ಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿಲ್ಲ. ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದ ಪಟ್ಟಿಯಲ್ಲಿ ಅಂತಿಮ ಐದನೇ ಸ್ಥಾನ ಪಡೆದ ಕೊನೆಯ ಭಾರತೀಯ ಚಿತ್ರ 2001 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಲಗಾನ್. ಮದರ್ ಇಂಡಿಯಾ (1958) ಮತ್ತು ಸಲಾಮ್ ಬಾಂಬೆ (1989) ಮೊದಲ ಐದು ಸ್ಥಾನಗಳಲ್ಲಿ ಸ್ಥಾನ ಪಡೆದ ಇತರ ಎರಡು ಭಾರತೀಯ ಚಲನಚಿತ್ರಗಳಾಗಿವೆ. ರಿಮಾ ದಾಸ್ ನಿರ್ದೇಶನದ ಅಸ್ಸಾಮೀಸ್ ಚಿತ್ರ ವಿಲೇಜ್ ರಾಕ್‌ಸ್ಟಾರ್ಸ್, ಕಳೆದ ವರ್ಷ ಆಸ್ಕರ್‌ಗೆ ಭಾರತದ ಅಧಿಕೃತ ಸಲ್ಲಿಕೆಯಾಗಿತ್ತು.

92 ನೇ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ 9, 2020 ರಂದು ಅಮೆರಿಕದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...