Homeಮುಖಪುಟಆಸ್ಕರ್ ನಲ್ಲಿಯೂ 'ಅಪ್ನಾ ಟೈಮ್ ಆಯೇಗ' ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

ಆಸ್ಕರ್ ನಲ್ಲಿಯೂ ‘ಅಪ್ನಾ ಟೈಮ್ ಆಯೇಗ’ ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

- Advertisement -
- Advertisement -

ಜೋಯಾ ಅಖ್ತರ್ ಅವರ ಗಲ್ಲಿ ಬಾಯ್ ಹಿಂದಿ ಚಲನಚಿತ್ರವು ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಪ್ರವೇಶವಾಗಿದೆ.

ಜೋಯಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಈ ದೊಡ್ಡ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ.

“92 ನೇ ಆಸ್ಕರ್ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ಪ್ರವೇಶವಾಗಿ ಗಲ್ಲಿಬಾಯ್ ಆಯ್ಕೆಯಾಗಿದೆ #Apnatimeaayega” ಅಪ್ನಾ ಟೈಮ್ ಆಯೇಗ, (ನಮಗೂ ಸಮಯ ಬರುತ್ತೆ)  ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ಈ ಚಿತ್ರವು ಆಯುಷ್ಮಾನ್ ಖುರಾನಾ ಅಭಿನಯದ ಬದಾಯಿ ಹೋ ಮತ್ತು ಅಂಧಾದುನ್ ಚಿತ್ರಗಳ ಜೊತೆಗೆ ನಿಕಟ ಸ್ಪರ್ದೇಯ ನಂತರ ಆಸ್ಕರ್ ಗೆ ಪ್ರವೇಶಿಸಿದೆ ಎಂದು ಹೇಳಲಾಗುತ್ತಿದೆ.

ಗಲ್ಲಿ ಬಾಯ್ ರಾಪರ್ ನೇಜಿಯವರ ಜೀವನವನ್ನು ಆಧರಿಸಿದ ಕಥೆಯಾಗಿದ್ದು ಮುಂಬೈನ ಬೀದಿ ರಾಪ್ಪರ್‌ಗಳ ಕಥೆಯನ್ನು ಮನೋಜ್ಞವಾಗಿ ಹೇಳಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಕೂಡ ನಟಿಸಿದ್ದಾರೆ.

ಖ್ಯಾತ ನಟ-ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಈ ವರ್ಷದ ಆಯ್ಕೆ ಸಮಿತಿಯ ತೀರ್ಪುಗಾರರ ಮುಖ್ಯಸ್ಥರಾಗಿದ್ದರು. ಈ ಚಿತ್ರವು 92 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಇದುವರೆಗೂ ಯಾವುದೇ ಭಾರತೀಯ ಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿಲ್ಲ. ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದ ಪಟ್ಟಿಯಲ್ಲಿ ಅಂತಿಮ ಐದನೇ ಸ್ಥಾನ ಪಡೆದ ಕೊನೆಯ ಭಾರತೀಯ ಚಿತ್ರ 2001 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಲಗಾನ್. ಮದರ್ ಇಂಡಿಯಾ (1958) ಮತ್ತು ಸಲಾಮ್ ಬಾಂಬೆ (1989) ಮೊದಲ ಐದು ಸ್ಥಾನಗಳಲ್ಲಿ ಸ್ಥಾನ ಪಡೆದ ಇತರ ಎರಡು ಭಾರತೀಯ ಚಲನಚಿತ್ರಗಳಾಗಿವೆ. ರಿಮಾ ದಾಸ್ ನಿರ್ದೇಶನದ ಅಸ್ಸಾಮೀಸ್ ಚಿತ್ರ ವಿಲೇಜ್ ರಾಕ್‌ಸ್ಟಾರ್ಸ್, ಕಳೆದ ವರ್ಷ ಆಸ್ಕರ್‌ಗೆ ಭಾರತದ ಅಧಿಕೃತ ಸಲ್ಲಿಕೆಯಾಗಿತ್ತು.

92 ನೇ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ 9, 2020 ರಂದು ಅಮೆರಿಕದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...