Homeಮುಖಪುಟಆಸ್ಕರ್ ನಲ್ಲಿಯೂ 'ಅಪ್ನಾ ಟೈಮ್ ಆಯೇಗ' ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

ಆಸ್ಕರ್ ನಲ್ಲಿಯೂ ‘ಅಪ್ನಾ ಟೈಮ್ ಆಯೇಗ’ ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

- Advertisement -
- Advertisement -

ಜೋಯಾ ಅಖ್ತರ್ ಅವರ ಗಲ್ಲಿ ಬಾಯ್ ಹಿಂದಿ ಚಲನಚಿತ್ರವು ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಪ್ರವೇಶವಾಗಿದೆ.

ಜೋಯಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಈ ದೊಡ್ಡ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ.

“92 ನೇ ಆಸ್ಕರ್ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ಪ್ರವೇಶವಾಗಿ ಗಲ್ಲಿಬಾಯ್ ಆಯ್ಕೆಯಾಗಿದೆ #Apnatimeaayega” ಅಪ್ನಾ ಟೈಮ್ ಆಯೇಗ, (ನಮಗೂ ಸಮಯ ಬರುತ್ತೆ)  ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ಈ ಚಿತ್ರವು ಆಯುಷ್ಮಾನ್ ಖುರಾನಾ ಅಭಿನಯದ ಬದಾಯಿ ಹೋ ಮತ್ತು ಅಂಧಾದುನ್ ಚಿತ್ರಗಳ ಜೊತೆಗೆ ನಿಕಟ ಸ್ಪರ್ದೇಯ ನಂತರ ಆಸ್ಕರ್ ಗೆ ಪ್ರವೇಶಿಸಿದೆ ಎಂದು ಹೇಳಲಾಗುತ್ತಿದೆ.

ಗಲ್ಲಿ ಬಾಯ್ ರಾಪರ್ ನೇಜಿಯವರ ಜೀವನವನ್ನು ಆಧರಿಸಿದ ಕಥೆಯಾಗಿದ್ದು ಮುಂಬೈನ ಬೀದಿ ರಾಪ್ಪರ್‌ಗಳ ಕಥೆಯನ್ನು ಮನೋಜ್ಞವಾಗಿ ಹೇಳಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಕೂಡ ನಟಿಸಿದ್ದಾರೆ.

ಖ್ಯಾತ ನಟ-ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಈ ವರ್ಷದ ಆಯ್ಕೆ ಸಮಿತಿಯ ತೀರ್ಪುಗಾರರ ಮುಖ್ಯಸ್ಥರಾಗಿದ್ದರು. ಈ ಚಿತ್ರವು 92 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಇದುವರೆಗೂ ಯಾವುದೇ ಭಾರತೀಯ ಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿಲ್ಲ. ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದ ಪಟ್ಟಿಯಲ್ಲಿ ಅಂತಿಮ ಐದನೇ ಸ್ಥಾನ ಪಡೆದ ಕೊನೆಯ ಭಾರತೀಯ ಚಿತ್ರ 2001 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಲಗಾನ್. ಮದರ್ ಇಂಡಿಯಾ (1958) ಮತ್ತು ಸಲಾಮ್ ಬಾಂಬೆ (1989) ಮೊದಲ ಐದು ಸ್ಥಾನಗಳಲ್ಲಿ ಸ್ಥಾನ ಪಡೆದ ಇತರ ಎರಡು ಭಾರತೀಯ ಚಲನಚಿತ್ರಗಳಾಗಿವೆ. ರಿಮಾ ದಾಸ್ ನಿರ್ದೇಶನದ ಅಸ್ಸಾಮೀಸ್ ಚಿತ್ರ ವಿಲೇಜ್ ರಾಕ್‌ಸ್ಟಾರ್ಸ್, ಕಳೆದ ವರ್ಷ ಆಸ್ಕರ್‌ಗೆ ಭಾರತದ ಅಧಿಕೃತ ಸಲ್ಲಿಕೆಯಾಗಿತ್ತು.

92 ನೇ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ 9, 2020 ರಂದು ಅಮೆರಿಕದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...