Homeಮುಖಪುಟಆಸ್ಕರ್ ನಲ್ಲಿಯೂ 'ಅಪ್ನಾ ಟೈಮ್ ಆಯೇಗ' ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

ಆಸ್ಕರ್ ನಲ್ಲಿಯೂ ‘ಅಪ್ನಾ ಟೈಮ್ ಆಯೇಗ’ ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

- Advertisement -
- Advertisement -

ಜೋಯಾ ಅಖ್ತರ್ ಅವರ ಗಲ್ಲಿ ಬಾಯ್ ಹಿಂದಿ ಚಲನಚಿತ್ರವು ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಪ್ರವೇಶವಾಗಿದೆ.

ಜೋಯಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಈ ದೊಡ್ಡ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ.

“92 ನೇ ಆಸ್ಕರ್ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ಪ್ರವೇಶವಾಗಿ ಗಲ್ಲಿಬಾಯ್ ಆಯ್ಕೆಯಾಗಿದೆ #Apnatimeaayega” ಅಪ್ನಾ ಟೈಮ್ ಆಯೇಗ, (ನಮಗೂ ಸಮಯ ಬರುತ್ತೆ)  ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ಈ ಚಿತ್ರವು ಆಯುಷ್ಮಾನ್ ಖುರಾನಾ ಅಭಿನಯದ ಬದಾಯಿ ಹೋ ಮತ್ತು ಅಂಧಾದುನ್ ಚಿತ್ರಗಳ ಜೊತೆಗೆ ನಿಕಟ ಸ್ಪರ್ದೇಯ ನಂತರ ಆಸ್ಕರ್ ಗೆ ಪ್ರವೇಶಿಸಿದೆ ಎಂದು ಹೇಳಲಾಗುತ್ತಿದೆ.

ಗಲ್ಲಿ ಬಾಯ್ ರಾಪರ್ ನೇಜಿಯವರ ಜೀವನವನ್ನು ಆಧರಿಸಿದ ಕಥೆಯಾಗಿದ್ದು ಮುಂಬೈನ ಬೀದಿ ರಾಪ್ಪರ್‌ಗಳ ಕಥೆಯನ್ನು ಮನೋಜ್ಞವಾಗಿ ಹೇಳಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಕೂಡ ನಟಿಸಿದ್ದಾರೆ.

ಖ್ಯಾತ ನಟ-ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಈ ವರ್ಷದ ಆಯ್ಕೆ ಸಮಿತಿಯ ತೀರ್ಪುಗಾರರ ಮುಖ್ಯಸ್ಥರಾಗಿದ್ದರು. ಈ ಚಿತ್ರವು 92 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಇದುವರೆಗೂ ಯಾವುದೇ ಭಾರತೀಯ ಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿಲ್ಲ. ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದ ಪಟ್ಟಿಯಲ್ಲಿ ಅಂತಿಮ ಐದನೇ ಸ್ಥಾನ ಪಡೆದ ಕೊನೆಯ ಭಾರತೀಯ ಚಿತ್ರ 2001 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಲಗಾನ್. ಮದರ್ ಇಂಡಿಯಾ (1958) ಮತ್ತು ಸಲಾಮ್ ಬಾಂಬೆ (1989) ಮೊದಲ ಐದು ಸ್ಥಾನಗಳಲ್ಲಿ ಸ್ಥಾನ ಪಡೆದ ಇತರ ಎರಡು ಭಾರತೀಯ ಚಲನಚಿತ್ರಗಳಾಗಿವೆ. ರಿಮಾ ದಾಸ್ ನಿರ್ದೇಶನದ ಅಸ್ಸಾಮೀಸ್ ಚಿತ್ರ ವಿಲೇಜ್ ರಾಕ್‌ಸ್ಟಾರ್ಸ್, ಕಳೆದ ವರ್ಷ ಆಸ್ಕರ್‌ಗೆ ಭಾರತದ ಅಧಿಕೃತ ಸಲ್ಲಿಕೆಯಾಗಿತ್ತು.

92 ನೇ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ 9, 2020 ರಂದು ಅಮೆರಿಕದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...