Homeಮುಖಪುಟಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷ

- Advertisement -
- Advertisement -

|ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಬಡ ಕುಟುಂಬದಲ್ಲಿ ಜನಿಸಿದವರಿಗೂ ಸಹ ಸಾಕಷ್ಟು ಪ್ರತಿಭೆ ಇದ್ದೇ ಇರುತ್ತದೆ. ಆದರೆ ಆತ ಅಥವಾ ಆಕೆ ಏನನ್ನಾದರು ಸಾಧಿಸಬೇಕೆಂದು ನಿಂತಾಗ ಮೊದ ಮೊದಲಿಗೆ ಭಯಾನಕ ಅವಮಾನ ಮತ್ತು ಸೋಲುಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಕೊನೆಯವರೆಗು ನಿಂತು ಗೆಲ್ಲುವುದು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಅಂತಹ ಸಾಧನೆ ಮಾಡಿದ ಯುವಕನ ಕಥೆಯೇ ಗಲ್ಲಿಬಾಯ್. ಬಾಲಿವುಡ್‍ನಲ್ಲಿ ಸದ್ದು ಮಾಡಿರು ಈ ವಿಶೇಷ ಚಿತ್ರ ದೇಶಾದ್ಯಂತ ಒಳ್ಳೆಯ ಪ್ರಶಂಸೆಗಳನ್ನು ಪಡೆದಿದೆ. ಇದು ಇಬ್ಬರು ಪ್ರಚಲಿತ ರ್ಯಾಪ್ ಗಾಯನದ ತಾರೆಗಳಾದ ನೇಜಿ (ನವೀದ್ ಶೇಕ್) ಮತ್ತು ಡಿವೈನ್ (ವೀವಾನ್ ಫರ್ನಾಂಡೀಸ್)ರ ನೈಜ ಜೀವನದ ಕಥೆಯಿಂದ ಪಡೆದ ಸ್ಫೂರ್ತಿಯಿಂದ ಮಾಡಲಾಗಿದೆ.

ಮುಂಬಯಿಯ ಹೆಸರಾಂತ ಸ್ಲಂ ಧಾರವೀಯ ಗಲ್ಲಿಯ ಹುಡುಗ ಮೂರಾದ್ ಒಂದು ಬಡ ಮುಸ್ಲೀಂ ಕುಟುಂಬದಲ್ಲಿ ಹುಟ್ಟಿ ತಾನು ಒಬ್ಬ ರ್ಯಾಪ್ ಸಿಂಗರ್ ಆಗಬೇಕೆಂದು ಕನಸು ಕಾಣುತ್ತಿರುತ್ತಾನೆ. ಆದರೆ ಬಡತನ ಈತನನ್ನು ಹಿಂದೆ ಎಳೆಯುತ್ತಿರುತ್ತದೆ. ಈತನ ತಂದೆ ಒಂದು ಶ್ರೀಮಂತ ಕುಟುಂಬದಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುತ್ತಾರೆ. ತಾಯಿ, ಅಜ್ಜಿ, ತಮ್ಮ ಹೀಗೆ ಕುಟುಂಬ ಸಾಗುತ್ತಿರಬೇಕಾದರೆ ದಿಡೀರ್ ಎಂದು ಇವರ ತಂದೆ ಮತ್ತೊಂದು ಮದುವೆಯಾಗುತ್ತಾನೆ. ಕೊನೆಯ ವರ್ಷದ ಪದವಿ ಓದುತ್ತಿರುವ ಮೂರಾದ್ ಓದನ್ನು ಮುಗಿಸಿ ಕೆಲಸಕ್ಕೆ ಹೋಗಬೇಕೆಂಬುದು ತಂದೆಯ ಬಯಕೆಯಾಗಿರುತ್ತದೆ. ಒಮ್ಮೆ ತಂದೆಯ ಕಾಲಿಗೆ ಏಟಾದಾಗ ತಂದೆಯ ಕೆಲಸಕ್ಕೆ ಈತನೆ ಹೋಗುತ್ತಾನೆ. ಕೆಲಸದ ಸಮಯದಲ್ಲೂ ಈತನ ಮನಸ್ಸು ಪೂರ್ತಿ ಸಂಗೀತದದಲ್ಲಿ ತೇಲುತಿರುತ್ತದೆ. ಇವನು ಮಾತ್ರ ಸಮಯ ಸಿಕ್ಕಾಗೆಲ್ಲ ಹಾಡುಗಳನ್ನು ಕೇಳುತ್ತಾ ಗಾಯಕನಾಗಬೇಕೆಂದು ಹುಚ್ಚು ಹಿಡಿಸಿಕೊಂಡಿರುತ್ತಾನೆ. ಇದಕ್ಕೆ ತನ್ನ ಪ್ರೀತಿಯ ಗೆಳತಿ ಸಫೀನಾ ಇವನ ಬೆಂಬಲಕ್ಕೆ ನಿಂತು ಪ್ರೋತ್ಸಾಹಿಸಿರುತ್ತಾಳೆ. ಅವಳು ಅವರ ಮನೆಯವರಿಗೆ ಸುಳ್ಳು ಹೇಳಿ ಪ್ರತಿದಿನ ಮೂರಾದ್ ನನ್ನು ಭೇಟಿಯಾಗುತ್ತಿರುತ್ತಾಳೆ.

ಈ ಮಧ್ಯೆ ಇವರ ಕಾಲೇಜಿನಲ್ಲಿ ಹಾಡಲು ಬಂದ ರ್ಯಾಪರ್ ಶೇರ್ ನನ್ನು ನಂತರ ಹುಡುಕಿಕೊಂಡು ಹೋಗಿ ಪರಿಚಯ ಮಾಡಿಕೊಳ್ಳುತ್ತಾನೆ. ಶೇರ್‍ನ ಸ್ನೇಹ ಮೂರಾದ್ ಗೆ ಹೊಸ ಭರವಸೆ ಮತ್ತು ಹೊಸ ಸ್ಫೂರ್ತಿಯನ್ನು ತರುತ್ತದೆ. ಶೇರ್ ತನ್ನ ಪಂಚ್ ಮಾತುಗಳಿಂದ ಮೂರಾದ್‍ನನ್ನು ಹುರಿದುಂಬಿಸುತ್ತಾನೆ. ನಿನ್ನಂತಹ ಕಷ್ಟದಲ್ಲಿರುವವರೇ ಏನಾದರೂ ಸಾಧನೆ ಮಾಡಲಿಕ್ಕೆ ಸಾಧ್ಯ ಎಲ್ಲಾ ಅನೂಕೂಲವಾಗಿದ್ದರೆ ಸಾಧನೆ ಮಾಡಲು ಯಾರು ಬರುವುದಿಲ್ಲ ಎಂದು ಹೇಳುತ್ತಾನೆ. ನಿನ್ನೋಳಗೆ ಅಡಗಿರುವಂತಹ ಲಾವರಸ ಹೊಡೆದು ಜ್ವಾಲಾಮುಖಿಯಾಗಿ ಹೊರಗಡೆ ಬರಲಿ ಎಂದು ಹೊಸ ಚೈತನ್ಯ ತುಂಬುತ್ತಾನೆ. ಈ ಮಧ್ಯೆ ಮೂರಾದ್ ಹತ್ತಿರ ಹಾಡಿಸಿ ಒಂದು ವಿಡಿಯೋ ಮಾಡಿ ಗಲ್ಲಿಬಾಯ್ ಹೆಸರಿನಲ್ಲಿ ಯೂಟೂಬ್ ಅಲ್ಲಿ ಬಿಡುತ್ತಾರೆ. ಅದು ಒಂದಷ್ಟು ಜನ ಗುರುತಿಸುವಂತಾಗುತ್ತದೆ. ವಿಡಿಯೋ ನೋಡಿ ಇವರನ್ನು ಬೇಟಿಯಾಗುವ ಸ್ಕೈ (ಕಲ್ಕಿ ಕೋಚ್ಲಿನ್) ಎಂಬ ಸಂಗೀತದ ಸ್ಟುಡೀಯೋ ಹೊಂದಿರುವ ಹುಡುಗಿ ಮೂರಾದ್ ಮತ್ತು ಷೇರ್ ಇಬ್ಬರನ್ನು ಸೇರಿಸಿ ಒಂದು ಆಲ್ಬಂ ಸಾಂಗ್ ಮಾಡಿ ಬಿಡುತ್ತಾರೆ. ಅದು ತುಂಬಾ ಸದ್ದು ಮಾಡುತ್ತದೆ. ಈ ಹಾಡನ್ನು ಕೇಳಿ ಮೂರಾದ್‍ನ ತಂದೆ ಕೆರಳುತ್ತಾನೆ ಇದರಿಂದ ಮನೆಯಲ್ಲಿ ಜಗಳವಾಗುತ್ತದೆ, ತಂದೆ ಈ ರ್ಯಾಪ್ ಹಾಡುವುದನ್ನು ಒಪ್ಪುವುದಿಲ್ಲ. ಮೂರಾದ್ ತನ್ನ ತಾಯಿ ತಮ್ಮನನ್ನು ಕರೆದುಕೊಂಡು ಮನೆಯಿಂದ ಹೊರಗಡೆ ಬಂದು ಬಿಡುತ್ತಾನೆ.

ಈತನ ಸ್ನೇಹಿತ ಚಿಕ್ಕಮಕ್ಕಳ ಜೊತೆ ಬೇರೆ ದಂಧೆಗಳನ್ನ ಮಾಡಿಸುವದನ್ನು ನಿಲ್ಲಿಸೆಂದು ಜಗಳ ಮಾಡುತ್ತಾನೆ ಆದರೆ ಇವೆಲ್ಲ ಮಾಡದೆ ಇದ್ದರ ಅವರಿಗೆ ತಿನ್ನಲು ಅನ್ನವು ಇರುವುದಿಲ್ಲ ಎಂದು ಹೇಳುತ್ತಾನೆ. ಮೂರಾದ್ ಮನೆಯಿಂದ ತನ್ನ ತಾಯಿ ಮತ್ತು ತಮ್ಮನನ್ನು ಕರೆದುಕೊಂಡು ಹೊರಬಂದಿರುವುದಿರಿಂದ ತನ್ನ ಕುಟುಂಬ ನಿರ್ವಹಣೆಗೆ ಹಣ ಸಾಕಾಗದೆ ಒದ್ದಾಡುತ್ತಾನೆ. ಕೊನೆಗೆ ತನ್ನ ಸ್ನೇಹಿತನ ಜೊತೆ ಸೇರಿ ಕಾರುಗಳನ್ನು ಕದ್ದು ಮಾರುವ ಕೆಲಸಕ್ಕೆ ಅನಿವಾರ್ಯವಾಗಿ ತೊಡಗಿಕೊಳ್ಳುತ್ತಾನೆ. ಕೊನಗೆ ಈತನ ಸ್ನೇಹಿತ ಪೋಲಿಸರ ಕೈಗೆ ಸಿಕ್ಕರೂ ಮೂರಾದ್ ಬಗ್ಗೆ ಮಾತ್ರ ಬಾಯಿ ಬಿಡುವುದಿಲ್ಲ. ತನ್ನ ತಾಯಿಯ ಸಹೋದರ (ಮಾವ) ಮಾಡುವ ಒತ್ತಾಯಕ್ಕೆ ಮಾವ ಕೆಲಸ ಮಾಡುವ ಖಾಸಗಿ ಕಂಪನಿಯಲ್ಲಿಯೇ ಈತನೂ ಕೆಲಸಕ್ಕೆ ಸೇರುತ್ತಾನೆ. ಆದರೆ ಈತ ಇದು ನನ್ನ ಜಾಗ ಅಲ್ಲ , ನಾನು ಮಾಡಬೇಕಾದ ಕೆಲಸ ಅಲ್ಲಾ ಎಂದು ತುಡಿಯುತ್ತಿರುತ್ತಾನೆ.

ಇದನ್ನು ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಒಂದು ದೊಡ್ಡ ರ್ಯಾಪರ್ ಗಾಯಕರಿಗಾಗಿ ಸ್ಫರ್ಧೆ ಇರುವುದು ಗೊತ್ತಾಗಿ ತನ್ನ ಮಾವನಿಗೆ ರಜೆ ಕೇಳುತ್ತಾನೆ ಆದರೆ ಅವನ ಮಾವ ತಿರಸ್ಕರಿಸುತ್ತಾನೆ. ಮೂರಾದ್ ಕೆಲಸವೇ ಬಿಟ್ಟು ಸ್ಪರ್ಧೆಯಲ್ಲಿ ಭಾಗವಹಿಸುತ್ತಾನೆ. ಕೊನೆಗೂ ಕಾಂಪಿಟೇಷನ್ ಅಲ್ಲಿ ಗೆದ್ದು ಆಪ್ನಾ ಟೈಮ್ ಆಯೇಗಾ ಎಂದು ಮಿಂಚುತ್ತಾನೆ. ಹೀಗೆ ಜೀವನದ ಅನುಕ್ಷಣವು ತನ್ನ ಗುರಿಗಾಗಿ ತುಡಿದು ಗೆಲ್ಲುವ ಯುವ ಸಾಧಕರ ಕಥೆ.

ನಮ್ಮ ಸಮಾಜದಲ್ಲಿ ಸಾಕಷ್ಟು ಪ್ರತಿಭೆಗಳು ಬಡವರ ಮನೆಗಳಲ್ಲಿಯೇ ತಮ್ಮ ಬಡತನ ಕಾರಣಕ್ಕಾಗಿ ಉಳಿದು ಹೋಗಿವೆ. ಎಲ್ಲೋ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹೊರಗಡೆ ಬಂದು ಮಿಂಚಿದ್ದಾರೆ ಮತ್ತು ಅಂತಹವರನ್ನು ಸಹ ಕೆಲವರು ಬಳಸಿಕೊಂಡು ಬಿಸಾಡಿದ ಉದಾಹರಣೆಗಳು ನಮ್ಮ ಮುಂದೆ ಇವೆ. ನಮ್ಮದೇ ರಾಜ್ಯದ ಉದಾಹರಣೆ ನೋಡುವುದಾದರೆ ಕಾಡಿನಲ್ಲಿ ವಾಸಿಸುತ್ತಿದ್ದ ಬುಡಕಟ್ಟು ಜನಾಂಗದ ರಾಜೇಶ್‍ನನ್ನು ಈ ಮಾಧ್ಯಮ ಲೋಕ ತಮ್ಮ ಟಿ.ಆರ್.ಪಿ ದಾಹಕ್ಕೆ ಹೇಗೆ ಬಳಸಿಕೊಂಡಿತು ಎಂಬದಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಈ ಸಿನೆಮಾ ಯುವಜನರು ತಾವು ಅಂದಕೊಂಡ ಯಶಸನ್ನು ಸಾಧಿಸಲು ಧೃಢವಾದ ನಂಬಿಕೆ ಮತ್ತು ಪ್ರಯತ್ನ ಕಲಿಕೆ ಎಷ್ಟು ಮುಖ್ಯ ಮತ್ತು ಜೀವನದಲ್ಲಿ ನಮ್ಮ ಆಶಯ ಸಾಧನೆಗೆ ಬರುವ ತೊಡಕುಗಳನ್ನು ಹೇಗೆ ಧೈರ್ಯದಿಂದ ಎದುರಿಸಬೇಕು ಎಂಬದನ್ನು ಮೂರಾದ್ ನ ಗೆಲುವಿನ ಮೂಲಕ ತೋರಿಸುತ್ತದೆ. ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷವೆನ್ನಬಹುದು. ಈಗ ಪ್ರತಿಭೆಯನ್ನು ಗುರ್ತಿಸಿಕೊಳ್ಳಲು ಸಾಮಾಜಿಕ ಜಾಲತಾಣದ ವೇದಿಕೆಗಳಿವೆ ಅದರ ಹೊರತಾಗಿ ಬೆಳೆಯಲು ತುಂಬಾ ಅವಕಾಶಗಳಿದ್ದರೂ ಸಹ ಯುವಜನರಿಗೆ ಸರಿಯಾದ ಮಾರ್ಗದರ್ಶನದ ಕೊರತೆ ಇದೆ. ಈ ಸಿನೆಮಾದಲ್ಲಿ ಮೂರಾದ್ ಪ್ರತಿ ಸಮಯದಲ್ಲಿ ಸಾಹಿತ್ಯ ಮತ್ತು ಬೀಟ್‍ಗಳನ್ನು ಸೇರಿಸಲು ಪ್ರತಿದಿನ ತಾಲೀಮು ನಡೆಸುತ್ತಿರುತ್ತಾನೆ.

ಇದನ್ನು ಓದಿ:  ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಈ ಸಿನೆಮಾದ ಕಥೆ ಮಧ್ಯೆ ನಡೆಯುವ ಮೂರಾದ್ ಮತ್ತು ಸಫೀನಾ ಪ್ರೀತಿ, ಜಗಳ ತಮಾಷೆ ತುಂಬಾ ಆಪ್ತವಾಗುತ್ತವೆ. ಮೂರಾದ್ ಪಾತ್ರವನ್ನು ರಣವೀರ್ ಸಿಂಗ್ ತನ್ನ ಒಳಗಡೆ ಇಳಿಸಿಕೊಂಡು ನಟಿಸಿದ್ದಾನೆ. ಮೂರಾದ್ ಪ್ರೀತಿಸುವ ಹಡುಗಿ ಸಫೀನಾ ಪಾತ್ರದಲ್ಲಿ ಆಲೀಯಾ ಭಟ್ ಕೂಡ ಉತ್ತಮವಾದ ಅಭಿನಯ ನೀಡಿದ್ದಾರೆ. ತಾವು ಜೀವನದಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ಮನಸ್ಸು ತುಂಬ ತುಂಬಿಕೊಂಡು ಜೊತೆಗಿರುವವರನ್ನು ಹುರಿದುಂಬಿಸುವ ಶೇರ್ ಪಾತ್ರದಲ್ಲಿ ಸಿದ್ದಾರ್ಥ ಚತುರ್ವೇದಿ ಚನ್ನಾಗಿ ಅಭಿನಯಿಸಿದ್ದಾರೆ. ಜೋಯಾ ಅಖ್ತರ್ ಈ ಸಿನೆಮಾವನ್ನು ನೋಡುಗರು ಸಿನೆಮಾದಲ್ಲಿಯೇ ಮುಳುಗಿರುವಂತೆ ನಿರ್ದೇಶಿಸಿದ್ದಾರೆ. ಸರಾಗವಾಗಿ ಸಾಗುವ ಕಥೆ ಪ್ರೇಕ್ಷಕರನ್ನು ಸಿನಾಮಾದ ಪಾತ್ರಗಳಜೊತೆ ಬೆಸೆಯುತ್ತದೆ. ಇದಕ್ಕೆ ಪೂರಕವಾದಂತಹ ಸಂಗೀತವನ್ನು ಕರ್ಷನ್ ಕಾಲೆ ಮಾಡಿದ್ದಾರೆ. ಈ ಸಿನೆಮಾ ಬರ್ಲಿನ್ ಸಿನೆಮಾ ಉತ್ಸವದಲ್ಲಿ ಪ್ರದರ್ಶನ ಖಂಡಿದೆ. ಇಂತಹ ಸ್ಫೂರ್ತಿಧಾಯಕ ಸಿನೆಮಾಗಳು ಬರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...