Homeಮುಖಪುಟಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷ

- Advertisement -
- Advertisement -

|ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಬಡ ಕುಟುಂಬದಲ್ಲಿ ಜನಿಸಿದವರಿಗೂ ಸಹ ಸಾಕಷ್ಟು ಪ್ರತಿಭೆ ಇದ್ದೇ ಇರುತ್ತದೆ. ಆದರೆ ಆತ ಅಥವಾ ಆಕೆ ಏನನ್ನಾದರು ಸಾಧಿಸಬೇಕೆಂದು ನಿಂತಾಗ ಮೊದ ಮೊದಲಿಗೆ ಭಯಾನಕ ಅವಮಾನ ಮತ್ತು ಸೋಲುಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಕೊನೆಯವರೆಗು ನಿಂತು ಗೆಲ್ಲುವುದು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಅಂತಹ ಸಾಧನೆ ಮಾಡಿದ ಯುವಕನ ಕಥೆಯೇ ಗಲ್ಲಿಬಾಯ್. ಬಾಲಿವುಡ್‍ನಲ್ಲಿ ಸದ್ದು ಮಾಡಿರು ಈ ವಿಶೇಷ ಚಿತ್ರ ದೇಶಾದ್ಯಂತ ಒಳ್ಳೆಯ ಪ್ರಶಂಸೆಗಳನ್ನು ಪಡೆದಿದೆ. ಇದು ಇಬ್ಬರು ಪ್ರಚಲಿತ ರ್ಯಾಪ್ ಗಾಯನದ ತಾರೆಗಳಾದ ನೇಜಿ (ನವೀದ್ ಶೇಕ್) ಮತ್ತು ಡಿವೈನ್ (ವೀವಾನ್ ಫರ್ನಾಂಡೀಸ್)ರ ನೈಜ ಜೀವನದ ಕಥೆಯಿಂದ ಪಡೆದ ಸ್ಫೂರ್ತಿಯಿಂದ ಮಾಡಲಾಗಿದೆ.

ಮುಂಬಯಿಯ ಹೆಸರಾಂತ ಸ್ಲಂ ಧಾರವೀಯ ಗಲ್ಲಿಯ ಹುಡುಗ ಮೂರಾದ್ ಒಂದು ಬಡ ಮುಸ್ಲೀಂ ಕುಟುಂಬದಲ್ಲಿ ಹುಟ್ಟಿ ತಾನು ಒಬ್ಬ ರ್ಯಾಪ್ ಸಿಂಗರ್ ಆಗಬೇಕೆಂದು ಕನಸು ಕಾಣುತ್ತಿರುತ್ತಾನೆ. ಆದರೆ ಬಡತನ ಈತನನ್ನು ಹಿಂದೆ ಎಳೆಯುತ್ತಿರುತ್ತದೆ. ಈತನ ತಂದೆ ಒಂದು ಶ್ರೀಮಂತ ಕುಟುಂಬದಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುತ್ತಾರೆ. ತಾಯಿ, ಅಜ್ಜಿ, ತಮ್ಮ ಹೀಗೆ ಕುಟುಂಬ ಸಾಗುತ್ತಿರಬೇಕಾದರೆ ದಿಡೀರ್ ಎಂದು ಇವರ ತಂದೆ ಮತ್ತೊಂದು ಮದುವೆಯಾಗುತ್ತಾನೆ. ಕೊನೆಯ ವರ್ಷದ ಪದವಿ ಓದುತ್ತಿರುವ ಮೂರಾದ್ ಓದನ್ನು ಮುಗಿಸಿ ಕೆಲಸಕ್ಕೆ ಹೋಗಬೇಕೆಂಬುದು ತಂದೆಯ ಬಯಕೆಯಾಗಿರುತ್ತದೆ. ಒಮ್ಮೆ ತಂದೆಯ ಕಾಲಿಗೆ ಏಟಾದಾಗ ತಂದೆಯ ಕೆಲಸಕ್ಕೆ ಈತನೆ ಹೋಗುತ್ತಾನೆ. ಕೆಲಸದ ಸಮಯದಲ್ಲೂ ಈತನ ಮನಸ್ಸು ಪೂರ್ತಿ ಸಂಗೀತದದಲ್ಲಿ ತೇಲುತಿರುತ್ತದೆ. ಇವನು ಮಾತ್ರ ಸಮಯ ಸಿಕ್ಕಾಗೆಲ್ಲ ಹಾಡುಗಳನ್ನು ಕೇಳುತ್ತಾ ಗಾಯಕನಾಗಬೇಕೆಂದು ಹುಚ್ಚು ಹಿಡಿಸಿಕೊಂಡಿರುತ್ತಾನೆ. ಇದಕ್ಕೆ ತನ್ನ ಪ್ರೀತಿಯ ಗೆಳತಿ ಸಫೀನಾ ಇವನ ಬೆಂಬಲಕ್ಕೆ ನಿಂತು ಪ್ರೋತ್ಸಾಹಿಸಿರುತ್ತಾಳೆ. ಅವಳು ಅವರ ಮನೆಯವರಿಗೆ ಸುಳ್ಳು ಹೇಳಿ ಪ್ರತಿದಿನ ಮೂರಾದ್ ನನ್ನು ಭೇಟಿಯಾಗುತ್ತಿರುತ್ತಾಳೆ.

ಈ ಮಧ್ಯೆ ಇವರ ಕಾಲೇಜಿನಲ್ಲಿ ಹಾಡಲು ಬಂದ ರ್ಯಾಪರ್ ಶೇರ್ ನನ್ನು ನಂತರ ಹುಡುಕಿಕೊಂಡು ಹೋಗಿ ಪರಿಚಯ ಮಾಡಿಕೊಳ್ಳುತ್ತಾನೆ. ಶೇರ್‍ನ ಸ್ನೇಹ ಮೂರಾದ್ ಗೆ ಹೊಸ ಭರವಸೆ ಮತ್ತು ಹೊಸ ಸ್ಫೂರ್ತಿಯನ್ನು ತರುತ್ತದೆ. ಶೇರ್ ತನ್ನ ಪಂಚ್ ಮಾತುಗಳಿಂದ ಮೂರಾದ್‍ನನ್ನು ಹುರಿದುಂಬಿಸುತ್ತಾನೆ. ನಿನ್ನಂತಹ ಕಷ್ಟದಲ್ಲಿರುವವರೇ ಏನಾದರೂ ಸಾಧನೆ ಮಾಡಲಿಕ್ಕೆ ಸಾಧ್ಯ ಎಲ್ಲಾ ಅನೂಕೂಲವಾಗಿದ್ದರೆ ಸಾಧನೆ ಮಾಡಲು ಯಾರು ಬರುವುದಿಲ್ಲ ಎಂದು ಹೇಳುತ್ತಾನೆ. ನಿನ್ನೋಳಗೆ ಅಡಗಿರುವಂತಹ ಲಾವರಸ ಹೊಡೆದು ಜ್ವಾಲಾಮುಖಿಯಾಗಿ ಹೊರಗಡೆ ಬರಲಿ ಎಂದು ಹೊಸ ಚೈತನ್ಯ ತುಂಬುತ್ತಾನೆ. ಈ ಮಧ್ಯೆ ಮೂರಾದ್ ಹತ್ತಿರ ಹಾಡಿಸಿ ಒಂದು ವಿಡಿಯೋ ಮಾಡಿ ಗಲ್ಲಿಬಾಯ್ ಹೆಸರಿನಲ್ಲಿ ಯೂಟೂಬ್ ಅಲ್ಲಿ ಬಿಡುತ್ತಾರೆ. ಅದು ಒಂದಷ್ಟು ಜನ ಗುರುತಿಸುವಂತಾಗುತ್ತದೆ. ವಿಡಿಯೋ ನೋಡಿ ಇವರನ್ನು ಬೇಟಿಯಾಗುವ ಸ್ಕೈ (ಕಲ್ಕಿ ಕೋಚ್ಲಿನ್) ಎಂಬ ಸಂಗೀತದ ಸ್ಟುಡೀಯೋ ಹೊಂದಿರುವ ಹುಡುಗಿ ಮೂರಾದ್ ಮತ್ತು ಷೇರ್ ಇಬ್ಬರನ್ನು ಸೇರಿಸಿ ಒಂದು ಆಲ್ಬಂ ಸಾಂಗ್ ಮಾಡಿ ಬಿಡುತ್ತಾರೆ. ಅದು ತುಂಬಾ ಸದ್ದು ಮಾಡುತ್ತದೆ. ಈ ಹಾಡನ್ನು ಕೇಳಿ ಮೂರಾದ್‍ನ ತಂದೆ ಕೆರಳುತ್ತಾನೆ ಇದರಿಂದ ಮನೆಯಲ್ಲಿ ಜಗಳವಾಗುತ್ತದೆ, ತಂದೆ ಈ ರ್ಯಾಪ್ ಹಾಡುವುದನ್ನು ಒಪ್ಪುವುದಿಲ್ಲ. ಮೂರಾದ್ ತನ್ನ ತಾಯಿ ತಮ್ಮನನ್ನು ಕರೆದುಕೊಂಡು ಮನೆಯಿಂದ ಹೊರಗಡೆ ಬಂದು ಬಿಡುತ್ತಾನೆ.

ಈತನ ಸ್ನೇಹಿತ ಚಿಕ್ಕಮಕ್ಕಳ ಜೊತೆ ಬೇರೆ ದಂಧೆಗಳನ್ನ ಮಾಡಿಸುವದನ್ನು ನಿಲ್ಲಿಸೆಂದು ಜಗಳ ಮಾಡುತ್ತಾನೆ ಆದರೆ ಇವೆಲ್ಲ ಮಾಡದೆ ಇದ್ದರ ಅವರಿಗೆ ತಿನ್ನಲು ಅನ್ನವು ಇರುವುದಿಲ್ಲ ಎಂದು ಹೇಳುತ್ತಾನೆ. ಮೂರಾದ್ ಮನೆಯಿಂದ ತನ್ನ ತಾಯಿ ಮತ್ತು ತಮ್ಮನನ್ನು ಕರೆದುಕೊಂಡು ಹೊರಬಂದಿರುವುದಿರಿಂದ ತನ್ನ ಕುಟುಂಬ ನಿರ್ವಹಣೆಗೆ ಹಣ ಸಾಕಾಗದೆ ಒದ್ದಾಡುತ್ತಾನೆ. ಕೊನೆಗೆ ತನ್ನ ಸ್ನೇಹಿತನ ಜೊತೆ ಸೇರಿ ಕಾರುಗಳನ್ನು ಕದ್ದು ಮಾರುವ ಕೆಲಸಕ್ಕೆ ಅನಿವಾರ್ಯವಾಗಿ ತೊಡಗಿಕೊಳ್ಳುತ್ತಾನೆ. ಕೊನಗೆ ಈತನ ಸ್ನೇಹಿತ ಪೋಲಿಸರ ಕೈಗೆ ಸಿಕ್ಕರೂ ಮೂರಾದ್ ಬಗ್ಗೆ ಮಾತ್ರ ಬಾಯಿ ಬಿಡುವುದಿಲ್ಲ. ತನ್ನ ತಾಯಿಯ ಸಹೋದರ (ಮಾವ) ಮಾಡುವ ಒತ್ತಾಯಕ್ಕೆ ಮಾವ ಕೆಲಸ ಮಾಡುವ ಖಾಸಗಿ ಕಂಪನಿಯಲ್ಲಿಯೇ ಈತನೂ ಕೆಲಸಕ್ಕೆ ಸೇರುತ್ತಾನೆ. ಆದರೆ ಈತ ಇದು ನನ್ನ ಜಾಗ ಅಲ್ಲ , ನಾನು ಮಾಡಬೇಕಾದ ಕೆಲಸ ಅಲ್ಲಾ ಎಂದು ತುಡಿಯುತ್ತಿರುತ್ತಾನೆ.

ಇದನ್ನು ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಒಂದು ದೊಡ್ಡ ರ್ಯಾಪರ್ ಗಾಯಕರಿಗಾಗಿ ಸ್ಫರ್ಧೆ ಇರುವುದು ಗೊತ್ತಾಗಿ ತನ್ನ ಮಾವನಿಗೆ ರಜೆ ಕೇಳುತ್ತಾನೆ ಆದರೆ ಅವನ ಮಾವ ತಿರಸ್ಕರಿಸುತ್ತಾನೆ. ಮೂರಾದ್ ಕೆಲಸವೇ ಬಿಟ್ಟು ಸ್ಪರ್ಧೆಯಲ್ಲಿ ಭಾಗವಹಿಸುತ್ತಾನೆ. ಕೊನೆಗೂ ಕಾಂಪಿಟೇಷನ್ ಅಲ್ಲಿ ಗೆದ್ದು ಆಪ್ನಾ ಟೈಮ್ ಆಯೇಗಾ ಎಂದು ಮಿಂಚುತ್ತಾನೆ. ಹೀಗೆ ಜೀವನದ ಅನುಕ್ಷಣವು ತನ್ನ ಗುರಿಗಾಗಿ ತುಡಿದು ಗೆಲ್ಲುವ ಯುವ ಸಾಧಕರ ಕಥೆ.

ನಮ್ಮ ಸಮಾಜದಲ್ಲಿ ಸಾಕಷ್ಟು ಪ್ರತಿಭೆಗಳು ಬಡವರ ಮನೆಗಳಲ್ಲಿಯೇ ತಮ್ಮ ಬಡತನ ಕಾರಣಕ್ಕಾಗಿ ಉಳಿದು ಹೋಗಿವೆ. ಎಲ್ಲೋ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹೊರಗಡೆ ಬಂದು ಮಿಂಚಿದ್ದಾರೆ ಮತ್ತು ಅಂತಹವರನ್ನು ಸಹ ಕೆಲವರು ಬಳಸಿಕೊಂಡು ಬಿಸಾಡಿದ ಉದಾಹರಣೆಗಳು ನಮ್ಮ ಮುಂದೆ ಇವೆ. ನಮ್ಮದೇ ರಾಜ್ಯದ ಉದಾಹರಣೆ ನೋಡುವುದಾದರೆ ಕಾಡಿನಲ್ಲಿ ವಾಸಿಸುತ್ತಿದ್ದ ಬುಡಕಟ್ಟು ಜನಾಂಗದ ರಾಜೇಶ್‍ನನ್ನು ಈ ಮಾಧ್ಯಮ ಲೋಕ ತಮ್ಮ ಟಿ.ಆರ್.ಪಿ ದಾಹಕ್ಕೆ ಹೇಗೆ ಬಳಸಿಕೊಂಡಿತು ಎಂಬದಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಈ ಸಿನೆಮಾ ಯುವಜನರು ತಾವು ಅಂದಕೊಂಡ ಯಶಸನ್ನು ಸಾಧಿಸಲು ಧೃಢವಾದ ನಂಬಿಕೆ ಮತ್ತು ಪ್ರಯತ್ನ ಕಲಿಕೆ ಎಷ್ಟು ಮುಖ್ಯ ಮತ್ತು ಜೀವನದಲ್ಲಿ ನಮ್ಮ ಆಶಯ ಸಾಧನೆಗೆ ಬರುವ ತೊಡಕುಗಳನ್ನು ಹೇಗೆ ಧೈರ್ಯದಿಂದ ಎದುರಿಸಬೇಕು ಎಂಬದನ್ನು ಮೂರಾದ್ ನ ಗೆಲುವಿನ ಮೂಲಕ ತೋರಿಸುತ್ತದೆ. ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷವೆನ್ನಬಹುದು. ಈಗ ಪ್ರತಿಭೆಯನ್ನು ಗುರ್ತಿಸಿಕೊಳ್ಳಲು ಸಾಮಾಜಿಕ ಜಾಲತಾಣದ ವೇದಿಕೆಗಳಿವೆ ಅದರ ಹೊರತಾಗಿ ಬೆಳೆಯಲು ತುಂಬಾ ಅವಕಾಶಗಳಿದ್ದರೂ ಸಹ ಯುವಜನರಿಗೆ ಸರಿಯಾದ ಮಾರ್ಗದರ್ಶನದ ಕೊರತೆ ಇದೆ. ಈ ಸಿನೆಮಾದಲ್ಲಿ ಮೂರಾದ್ ಪ್ರತಿ ಸಮಯದಲ್ಲಿ ಸಾಹಿತ್ಯ ಮತ್ತು ಬೀಟ್‍ಗಳನ್ನು ಸೇರಿಸಲು ಪ್ರತಿದಿನ ತಾಲೀಮು ನಡೆಸುತ್ತಿರುತ್ತಾನೆ.

ಇದನ್ನು ಓದಿ:  ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಈ ಸಿನೆಮಾದ ಕಥೆ ಮಧ್ಯೆ ನಡೆಯುವ ಮೂರಾದ್ ಮತ್ತು ಸಫೀನಾ ಪ್ರೀತಿ, ಜಗಳ ತಮಾಷೆ ತುಂಬಾ ಆಪ್ತವಾಗುತ್ತವೆ. ಮೂರಾದ್ ಪಾತ್ರವನ್ನು ರಣವೀರ್ ಸಿಂಗ್ ತನ್ನ ಒಳಗಡೆ ಇಳಿಸಿಕೊಂಡು ನಟಿಸಿದ್ದಾನೆ. ಮೂರಾದ್ ಪ್ರೀತಿಸುವ ಹಡುಗಿ ಸಫೀನಾ ಪಾತ್ರದಲ್ಲಿ ಆಲೀಯಾ ಭಟ್ ಕೂಡ ಉತ್ತಮವಾದ ಅಭಿನಯ ನೀಡಿದ್ದಾರೆ. ತಾವು ಜೀವನದಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ಮನಸ್ಸು ತುಂಬ ತುಂಬಿಕೊಂಡು ಜೊತೆಗಿರುವವರನ್ನು ಹುರಿದುಂಬಿಸುವ ಶೇರ್ ಪಾತ್ರದಲ್ಲಿ ಸಿದ್ದಾರ್ಥ ಚತುರ್ವೇದಿ ಚನ್ನಾಗಿ ಅಭಿನಯಿಸಿದ್ದಾರೆ. ಜೋಯಾ ಅಖ್ತರ್ ಈ ಸಿನೆಮಾವನ್ನು ನೋಡುಗರು ಸಿನೆಮಾದಲ್ಲಿಯೇ ಮುಳುಗಿರುವಂತೆ ನಿರ್ದೇಶಿಸಿದ್ದಾರೆ. ಸರಾಗವಾಗಿ ಸಾಗುವ ಕಥೆ ಪ್ರೇಕ್ಷಕರನ್ನು ಸಿನಾಮಾದ ಪಾತ್ರಗಳಜೊತೆ ಬೆಸೆಯುತ್ತದೆ. ಇದಕ್ಕೆ ಪೂರಕವಾದಂತಹ ಸಂಗೀತವನ್ನು ಕರ್ಷನ್ ಕಾಲೆ ಮಾಡಿದ್ದಾರೆ. ಈ ಸಿನೆಮಾ ಬರ್ಲಿನ್ ಸಿನೆಮಾ ಉತ್ಸವದಲ್ಲಿ ಪ್ರದರ್ಶನ ಖಂಡಿದೆ. ಇಂತಹ ಸ್ಫೂರ್ತಿಧಾಯಕ ಸಿನೆಮಾಗಳು ಬರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...