Homeಮುಖಪುಟಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಗಲ್ಲಿಯಲ್ಲಿ ಬೆಳೆದು ದಿಲ್ಲಿಯವರೆಗೂ ಸದ್ದು ಮಾಡಿದ ಹುಡುಗನ ಕಥೆಯೇ ಗಲ್ಲಿಬಾಯ್

ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷ

- Advertisement -
- Advertisement -

|ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಬಡ ಕುಟುಂಬದಲ್ಲಿ ಜನಿಸಿದವರಿಗೂ ಸಹ ಸಾಕಷ್ಟು ಪ್ರತಿಭೆ ಇದ್ದೇ ಇರುತ್ತದೆ. ಆದರೆ ಆತ ಅಥವಾ ಆಕೆ ಏನನ್ನಾದರು ಸಾಧಿಸಬೇಕೆಂದು ನಿಂತಾಗ ಮೊದ ಮೊದಲಿಗೆ ಭಯಾನಕ ಅವಮಾನ ಮತ್ತು ಸೋಲುಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಕೊನೆಯವರೆಗು ನಿಂತು ಗೆಲ್ಲುವುದು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಅಂತಹ ಸಾಧನೆ ಮಾಡಿದ ಯುವಕನ ಕಥೆಯೇ ಗಲ್ಲಿಬಾಯ್. ಬಾಲಿವುಡ್‍ನಲ್ಲಿ ಸದ್ದು ಮಾಡಿರು ಈ ವಿಶೇಷ ಚಿತ್ರ ದೇಶಾದ್ಯಂತ ಒಳ್ಳೆಯ ಪ್ರಶಂಸೆಗಳನ್ನು ಪಡೆದಿದೆ. ಇದು ಇಬ್ಬರು ಪ್ರಚಲಿತ ರ್ಯಾಪ್ ಗಾಯನದ ತಾರೆಗಳಾದ ನೇಜಿ (ನವೀದ್ ಶೇಕ್) ಮತ್ತು ಡಿವೈನ್ (ವೀವಾನ್ ಫರ್ನಾಂಡೀಸ್)ರ ನೈಜ ಜೀವನದ ಕಥೆಯಿಂದ ಪಡೆದ ಸ್ಫೂರ್ತಿಯಿಂದ ಮಾಡಲಾಗಿದೆ.

ಮುಂಬಯಿಯ ಹೆಸರಾಂತ ಸ್ಲಂ ಧಾರವೀಯ ಗಲ್ಲಿಯ ಹುಡುಗ ಮೂರಾದ್ ಒಂದು ಬಡ ಮುಸ್ಲೀಂ ಕುಟುಂಬದಲ್ಲಿ ಹುಟ್ಟಿ ತಾನು ಒಬ್ಬ ರ್ಯಾಪ್ ಸಿಂಗರ್ ಆಗಬೇಕೆಂದು ಕನಸು ಕಾಣುತ್ತಿರುತ್ತಾನೆ. ಆದರೆ ಬಡತನ ಈತನನ್ನು ಹಿಂದೆ ಎಳೆಯುತ್ತಿರುತ್ತದೆ. ಈತನ ತಂದೆ ಒಂದು ಶ್ರೀಮಂತ ಕುಟುಂಬದಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುತ್ತಾರೆ. ತಾಯಿ, ಅಜ್ಜಿ, ತಮ್ಮ ಹೀಗೆ ಕುಟುಂಬ ಸಾಗುತ್ತಿರಬೇಕಾದರೆ ದಿಡೀರ್ ಎಂದು ಇವರ ತಂದೆ ಮತ್ತೊಂದು ಮದುವೆಯಾಗುತ್ತಾನೆ. ಕೊನೆಯ ವರ್ಷದ ಪದವಿ ಓದುತ್ತಿರುವ ಮೂರಾದ್ ಓದನ್ನು ಮುಗಿಸಿ ಕೆಲಸಕ್ಕೆ ಹೋಗಬೇಕೆಂಬುದು ತಂದೆಯ ಬಯಕೆಯಾಗಿರುತ್ತದೆ. ಒಮ್ಮೆ ತಂದೆಯ ಕಾಲಿಗೆ ಏಟಾದಾಗ ತಂದೆಯ ಕೆಲಸಕ್ಕೆ ಈತನೆ ಹೋಗುತ್ತಾನೆ. ಕೆಲಸದ ಸಮಯದಲ್ಲೂ ಈತನ ಮನಸ್ಸು ಪೂರ್ತಿ ಸಂಗೀತದದಲ್ಲಿ ತೇಲುತಿರುತ್ತದೆ. ಇವನು ಮಾತ್ರ ಸಮಯ ಸಿಕ್ಕಾಗೆಲ್ಲ ಹಾಡುಗಳನ್ನು ಕೇಳುತ್ತಾ ಗಾಯಕನಾಗಬೇಕೆಂದು ಹುಚ್ಚು ಹಿಡಿಸಿಕೊಂಡಿರುತ್ತಾನೆ. ಇದಕ್ಕೆ ತನ್ನ ಪ್ರೀತಿಯ ಗೆಳತಿ ಸಫೀನಾ ಇವನ ಬೆಂಬಲಕ್ಕೆ ನಿಂತು ಪ್ರೋತ್ಸಾಹಿಸಿರುತ್ತಾಳೆ. ಅವಳು ಅವರ ಮನೆಯವರಿಗೆ ಸುಳ್ಳು ಹೇಳಿ ಪ್ರತಿದಿನ ಮೂರಾದ್ ನನ್ನು ಭೇಟಿಯಾಗುತ್ತಿರುತ್ತಾಳೆ.

ಈ ಮಧ್ಯೆ ಇವರ ಕಾಲೇಜಿನಲ್ಲಿ ಹಾಡಲು ಬಂದ ರ್ಯಾಪರ್ ಶೇರ್ ನನ್ನು ನಂತರ ಹುಡುಕಿಕೊಂಡು ಹೋಗಿ ಪರಿಚಯ ಮಾಡಿಕೊಳ್ಳುತ್ತಾನೆ. ಶೇರ್‍ನ ಸ್ನೇಹ ಮೂರಾದ್ ಗೆ ಹೊಸ ಭರವಸೆ ಮತ್ತು ಹೊಸ ಸ್ಫೂರ್ತಿಯನ್ನು ತರುತ್ತದೆ. ಶೇರ್ ತನ್ನ ಪಂಚ್ ಮಾತುಗಳಿಂದ ಮೂರಾದ್‍ನನ್ನು ಹುರಿದುಂಬಿಸುತ್ತಾನೆ. ನಿನ್ನಂತಹ ಕಷ್ಟದಲ್ಲಿರುವವರೇ ಏನಾದರೂ ಸಾಧನೆ ಮಾಡಲಿಕ್ಕೆ ಸಾಧ್ಯ ಎಲ್ಲಾ ಅನೂಕೂಲವಾಗಿದ್ದರೆ ಸಾಧನೆ ಮಾಡಲು ಯಾರು ಬರುವುದಿಲ್ಲ ಎಂದು ಹೇಳುತ್ತಾನೆ. ನಿನ್ನೋಳಗೆ ಅಡಗಿರುವಂತಹ ಲಾವರಸ ಹೊಡೆದು ಜ್ವಾಲಾಮುಖಿಯಾಗಿ ಹೊರಗಡೆ ಬರಲಿ ಎಂದು ಹೊಸ ಚೈತನ್ಯ ತುಂಬುತ್ತಾನೆ. ಈ ಮಧ್ಯೆ ಮೂರಾದ್ ಹತ್ತಿರ ಹಾಡಿಸಿ ಒಂದು ವಿಡಿಯೋ ಮಾಡಿ ಗಲ್ಲಿಬಾಯ್ ಹೆಸರಿನಲ್ಲಿ ಯೂಟೂಬ್ ಅಲ್ಲಿ ಬಿಡುತ್ತಾರೆ. ಅದು ಒಂದಷ್ಟು ಜನ ಗುರುತಿಸುವಂತಾಗುತ್ತದೆ. ವಿಡಿಯೋ ನೋಡಿ ಇವರನ್ನು ಬೇಟಿಯಾಗುವ ಸ್ಕೈ (ಕಲ್ಕಿ ಕೋಚ್ಲಿನ್) ಎಂಬ ಸಂಗೀತದ ಸ್ಟುಡೀಯೋ ಹೊಂದಿರುವ ಹುಡುಗಿ ಮೂರಾದ್ ಮತ್ತು ಷೇರ್ ಇಬ್ಬರನ್ನು ಸೇರಿಸಿ ಒಂದು ಆಲ್ಬಂ ಸಾಂಗ್ ಮಾಡಿ ಬಿಡುತ್ತಾರೆ. ಅದು ತುಂಬಾ ಸದ್ದು ಮಾಡುತ್ತದೆ. ಈ ಹಾಡನ್ನು ಕೇಳಿ ಮೂರಾದ್‍ನ ತಂದೆ ಕೆರಳುತ್ತಾನೆ ಇದರಿಂದ ಮನೆಯಲ್ಲಿ ಜಗಳವಾಗುತ್ತದೆ, ತಂದೆ ಈ ರ್ಯಾಪ್ ಹಾಡುವುದನ್ನು ಒಪ್ಪುವುದಿಲ್ಲ. ಮೂರಾದ್ ತನ್ನ ತಾಯಿ ತಮ್ಮನನ್ನು ಕರೆದುಕೊಂಡು ಮನೆಯಿಂದ ಹೊರಗಡೆ ಬಂದು ಬಿಡುತ್ತಾನೆ.

ಈತನ ಸ್ನೇಹಿತ ಚಿಕ್ಕಮಕ್ಕಳ ಜೊತೆ ಬೇರೆ ದಂಧೆಗಳನ್ನ ಮಾಡಿಸುವದನ್ನು ನಿಲ್ಲಿಸೆಂದು ಜಗಳ ಮಾಡುತ್ತಾನೆ ಆದರೆ ಇವೆಲ್ಲ ಮಾಡದೆ ಇದ್ದರ ಅವರಿಗೆ ತಿನ್ನಲು ಅನ್ನವು ಇರುವುದಿಲ್ಲ ಎಂದು ಹೇಳುತ್ತಾನೆ. ಮೂರಾದ್ ಮನೆಯಿಂದ ತನ್ನ ತಾಯಿ ಮತ್ತು ತಮ್ಮನನ್ನು ಕರೆದುಕೊಂಡು ಹೊರಬಂದಿರುವುದಿರಿಂದ ತನ್ನ ಕುಟುಂಬ ನಿರ್ವಹಣೆಗೆ ಹಣ ಸಾಕಾಗದೆ ಒದ್ದಾಡುತ್ತಾನೆ. ಕೊನೆಗೆ ತನ್ನ ಸ್ನೇಹಿತನ ಜೊತೆ ಸೇರಿ ಕಾರುಗಳನ್ನು ಕದ್ದು ಮಾರುವ ಕೆಲಸಕ್ಕೆ ಅನಿವಾರ್ಯವಾಗಿ ತೊಡಗಿಕೊಳ್ಳುತ್ತಾನೆ. ಕೊನಗೆ ಈತನ ಸ್ನೇಹಿತ ಪೋಲಿಸರ ಕೈಗೆ ಸಿಕ್ಕರೂ ಮೂರಾದ್ ಬಗ್ಗೆ ಮಾತ್ರ ಬಾಯಿ ಬಿಡುವುದಿಲ್ಲ. ತನ್ನ ತಾಯಿಯ ಸಹೋದರ (ಮಾವ) ಮಾಡುವ ಒತ್ತಾಯಕ್ಕೆ ಮಾವ ಕೆಲಸ ಮಾಡುವ ಖಾಸಗಿ ಕಂಪನಿಯಲ್ಲಿಯೇ ಈತನೂ ಕೆಲಸಕ್ಕೆ ಸೇರುತ್ತಾನೆ. ಆದರೆ ಈತ ಇದು ನನ್ನ ಜಾಗ ಅಲ್ಲ , ನಾನು ಮಾಡಬೇಕಾದ ಕೆಲಸ ಅಲ್ಲಾ ಎಂದು ತುಡಿಯುತ್ತಿರುತ್ತಾನೆ.

ಇದನ್ನು ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಒಂದು ದೊಡ್ಡ ರ್ಯಾಪರ್ ಗಾಯಕರಿಗಾಗಿ ಸ್ಫರ್ಧೆ ಇರುವುದು ಗೊತ್ತಾಗಿ ತನ್ನ ಮಾವನಿಗೆ ರಜೆ ಕೇಳುತ್ತಾನೆ ಆದರೆ ಅವನ ಮಾವ ತಿರಸ್ಕರಿಸುತ್ತಾನೆ. ಮೂರಾದ್ ಕೆಲಸವೇ ಬಿಟ್ಟು ಸ್ಪರ್ಧೆಯಲ್ಲಿ ಭಾಗವಹಿಸುತ್ತಾನೆ. ಕೊನೆಗೂ ಕಾಂಪಿಟೇಷನ್ ಅಲ್ಲಿ ಗೆದ್ದು ಆಪ್ನಾ ಟೈಮ್ ಆಯೇಗಾ ಎಂದು ಮಿಂಚುತ್ತಾನೆ. ಹೀಗೆ ಜೀವನದ ಅನುಕ್ಷಣವು ತನ್ನ ಗುರಿಗಾಗಿ ತುಡಿದು ಗೆಲ್ಲುವ ಯುವ ಸಾಧಕರ ಕಥೆ.

ನಮ್ಮ ಸಮಾಜದಲ್ಲಿ ಸಾಕಷ್ಟು ಪ್ರತಿಭೆಗಳು ಬಡವರ ಮನೆಗಳಲ್ಲಿಯೇ ತಮ್ಮ ಬಡತನ ಕಾರಣಕ್ಕಾಗಿ ಉಳಿದು ಹೋಗಿವೆ. ಎಲ್ಲೋ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹೊರಗಡೆ ಬಂದು ಮಿಂಚಿದ್ದಾರೆ ಮತ್ತು ಅಂತಹವರನ್ನು ಸಹ ಕೆಲವರು ಬಳಸಿಕೊಂಡು ಬಿಸಾಡಿದ ಉದಾಹರಣೆಗಳು ನಮ್ಮ ಮುಂದೆ ಇವೆ. ನಮ್ಮದೇ ರಾಜ್ಯದ ಉದಾಹರಣೆ ನೋಡುವುದಾದರೆ ಕಾಡಿನಲ್ಲಿ ವಾಸಿಸುತ್ತಿದ್ದ ಬುಡಕಟ್ಟು ಜನಾಂಗದ ರಾಜೇಶ್‍ನನ್ನು ಈ ಮಾಧ್ಯಮ ಲೋಕ ತಮ್ಮ ಟಿ.ಆರ್.ಪಿ ದಾಹಕ್ಕೆ ಹೇಗೆ ಬಳಸಿಕೊಂಡಿತು ಎಂಬದಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಈ ಸಿನೆಮಾ ಯುವಜನರು ತಾವು ಅಂದಕೊಂಡ ಯಶಸನ್ನು ಸಾಧಿಸಲು ಧೃಢವಾದ ನಂಬಿಕೆ ಮತ್ತು ಪ್ರಯತ್ನ ಕಲಿಕೆ ಎಷ್ಟು ಮುಖ್ಯ ಮತ್ತು ಜೀವನದಲ್ಲಿ ನಮ್ಮ ಆಶಯ ಸಾಧನೆಗೆ ಬರುವ ತೊಡಕುಗಳನ್ನು ಹೇಗೆ ಧೈರ್ಯದಿಂದ ಎದುರಿಸಬೇಕು ಎಂಬದನ್ನು ಮೂರಾದ್ ನ ಗೆಲುವಿನ ಮೂಲಕ ತೋರಿಸುತ್ತದೆ. ಅತಿಯಾದ ಬಿಲ್ಡಪ್ ಕೊಡದೆ ಪಾತ್ರಗಳನ್ನು ನೈಜವೆನ್ನುವಂತೆ ಮೂಡಿಸಿರುವುದು ಈ ಸಿನೆಮಾದ ವಿಶೇಷವೆನ್ನಬಹುದು. ಈಗ ಪ್ರತಿಭೆಯನ್ನು ಗುರ್ತಿಸಿಕೊಳ್ಳಲು ಸಾಮಾಜಿಕ ಜಾಲತಾಣದ ವೇದಿಕೆಗಳಿವೆ ಅದರ ಹೊರತಾಗಿ ಬೆಳೆಯಲು ತುಂಬಾ ಅವಕಾಶಗಳಿದ್ದರೂ ಸಹ ಯುವಜನರಿಗೆ ಸರಿಯಾದ ಮಾರ್ಗದರ್ಶನದ ಕೊರತೆ ಇದೆ. ಈ ಸಿನೆಮಾದಲ್ಲಿ ಮೂರಾದ್ ಪ್ರತಿ ಸಮಯದಲ್ಲಿ ಸಾಹಿತ್ಯ ಮತ್ತು ಬೀಟ್‍ಗಳನ್ನು ಸೇರಿಸಲು ಪ್ರತಿದಿನ ತಾಲೀಮು ನಡೆಸುತ್ತಿರುತ್ತಾನೆ.

ಇದನ್ನು ಓದಿ:  ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಈ ಸಿನೆಮಾದ ಕಥೆ ಮಧ್ಯೆ ನಡೆಯುವ ಮೂರಾದ್ ಮತ್ತು ಸಫೀನಾ ಪ್ರೀತಿ, ಜಗಳ ತಮಾಷೆ ತುಂಬಾ ಆಪ್ತವಾಗುತ್ತವೆ. ಮೂರಾದ್ ಪಾತ್ರವನ್ನು ರಣವೀರ್ ಸಿಂಗ್ ತನ್ನ ಒಳಗಡೆ ಇಳಿಸಿಕೊಂಡು ನಟಿಸಿದ್ದಾನೆ. ಮೂರಾದ್ ಪ್ರೀತಿಸುವ ಹಡುಗಿ ಸಫೀನಾ ಪಾತ್ರದಲ್ಲಿ ಆಲೀಯಾ ಭಟ್ ಕೂಡ ಉತ್ತಮವಾದ ಅಭಿನಯ ನೀಡಿದ್ದಾರೆ. ತಾವು ಜೀವನದಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ಮನಸ್ಸು ತುಂಬ ತುಂಬಿಕೊಂಡು ಜೊತೆಗಿರುವವರನ್ನು ಹುರಿದುಂಬಿಸುವ ಶೇರ್ ಪಾತ್ರದಲ್ಲಿ ಸಿದ್ದಾರ್ಥ ಚತುರ್ವೇದಿ ಚನ್ನಾಗಿ ಅಭಿನಯಿಸಿದ್ದಾರೆ. ಜೋಯಾ ಅಖ್ತರ್ ಈ ಸಿನೆಮಾವನ್ನು ನೋಡುಗರು ಸಿನೆಮಾದಲ್ಲಿಯೇ ಮುಳುಗಿರುವಂತೆ ನಿರ್ದೇಶಿಸಿದ್ದಾರೆ. ಸರಾಗವಾಗಿ ಸಾಗುವ ಕಥೆ ಪ್ರೇಕ್ಷಕರನ್ನು ಸಿನಾಮಾದ ಪಾತ್ರಗಳಜೊತೆ ಬೆಸೆಯುತ್ತದೆ. ಇದಕ್ಕೆ ಪೂರಕವಾದಂತಹ ಸಂಗೀತವನ್ನು ಕರ್ಷನ್ ಕಾಲೆ ಮಾಡಿದ್ದಾರೆ. ಈ ಸಿನೆಮಾ ಬರ್ಲಿನ್ ಸಿನೆಮಾ ಉತ್ಸವದಲ್ಲಿ ಪ್ರದರ್ಶನ ಖಂಡಿದೆ. ಇಂತಹ ಸ್ಫೂರ್ತಿಧಾಯಕ ಸಿನೆಮಾಗಳು ಬರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...