Homeಮುಖಪುಟಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

ಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

- Advertisement -
- Advertisement -

“ಚುನಾವಣೆಯಲ್ಲಿ ಗೆಲ್ಲಬೇಕಾದರೆ ಬಂದೂಕು ಬಳಸಬೇಕು” ಎಂದು ಬಿಜೆಪಿ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿಕೆ ನೀಡಿರುವ ವಿಡಿಯೊವೊಂದು ಬೆಳಕಿಗೆ ಬಂದಿದೆ.

ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕವಾದ ಭಾರತೀಯ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಸದರ್ ಬಜಾರ್ ಘಟಕದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆಂದು ‘ಎಪಿಎನ್‌ಲೈವ್.ಕಾಂ’ ವರದಿ ಮಾಡಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ ಮುಖಂಡರೊಬ್ಬರು ಮಾತನಾಡುವುದನ್ನು, ವಿದ್ಯಾರ್ಥಿ ಘಟಕವನ್ನು ಉದ್ದೇಶಿಸಿ ಅವರು ಘೋಷಣೆಗಳನ್ನು ಕೂಗುವುದನ್ನು ಕಾಣಬಹುದು.

“ಉತ್ತಮ ವಾಗ್ಮಿ ಎಂಬ ಬಗ್ಗೆ ತನಗೆ ಹೆಚ್ಚು ತಿಳಿದಿಲ್ಲ” ಎಂದು ವಿದ್ಯಾರ್ಥಿ ನಾಯಕ ಹೇಳುವುದನ್ನು ಕಾಣಬಹುದು. “ಆದರೆ ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರ ಶಕ್ತಿ ಮತ್ತು ಶ್ರಮಕ್ಕೆ ಸಾಕ್ಷಿಯಾಗಿರುವುದರಿಂದ  ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ” ಎನ್ನುತ್ತಾರೆ.

ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರು ಚುನಾವಣೆ ಗೆಲ್ಲಲು ದೇಹ, ಮನಸ್ಸು, ಹಣ, ಬೇಕಿದ್ದರೆ ಬಂದೂಕು ಬಳಸುತ್ತಾರೆ ಎಂಬ ಮಾತುಗಳನ್ನು ಉಲ್ಲೇಖಿಸುತ್ತಾರೆ. ಈ ಮಾತುಗಳನ್ನು ಯಾರೋ ದೊಡ್ಡ ನಾಯಕರೊಬ್ಬರಿಗೆ ಹೇಳುತ್ತಿರುವಂತೆ ತೋರುತ್ತದೆ. ಆದರೆ ವಿಡಿಯೋದಲ್ಲಿ ಈ ದೊಡ್ಡ ಮುಖಂಡ ಯಾರೆಂಬುದು ದಾಖಲಾಗಿಲ್ಲ.

ಟ್ವಿಟರ್‌ನಲ್ಲಿ ವಿಡಿಯೊ ವೈರಲ್‌: ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ, ಅನೇಕ ಟ್ವಿಟರ್‌ ಬಳಕೆದಾರರು ವಿದ್ಯಾರ್ಥಿ ಮುಖಂಡನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯಾರ್ಥಿ ಮುಖಂಡನ ವಿರುದ್ಧ ಕ್ರಮಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಪರಿಶೀಲಿಸುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದ್ದರೂ, ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಹೊರಬೀಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ತನ್ನ ಘನತೆಯನ್ನು ಉಳಿಸಿಕೊಳ್ಳಲು ಇಂಥವರ ವಿರುದ್ಧ ಕ್ರಮ ಜರುಗಿಸಬೇಕು. ಈ ವಿಚಾರದಲ್ಲಿ ಆಯೋಗ ವಿಫಲವಾದರೆ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೆರಿಫೈ ಮಾಡಲ್ಪಟ್ಟ ಅನೇಕ ಟ್ವಿಟರ್‌ ಖಾತೆದಾರರು ಈ ವಿಡಿಯೊವನ್ನು ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚುನಾವಣೆಯಲ್ಲಿ ಬಂದೂಕು ಬಳಸಬೇಕು ಅಂತ ಹೇಳ್ತಾರೆ…ಆದರೆ ಅದೇ ಬಂದೂಕು ಅವನಿಗೆ ತಿರುಗಿ ಮುಟ್ಟಿದರೆ ಸುಖ ಸುಮ್ಮನೆ ಅವನೇ ಸಾಯ್ಬೇಕಲ್ಲ…ಹಾಗಾಗಿ ಇಂಥ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು….

  2. “ಬಂದೂಕು ಬಳಸಬೇಕು” ಎಂದು ಹೇಳಿರುವವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...