Homeಮುಖಪುಟಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

ಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

- Advertisement -
- Advertisement -

“ಚುನಾವಣೆಯಲ್ಲಿ ಗೆಲ್ಲಬೇಕಾದರೆ ಬಂದೂಕು ಬಳಸಬೇಕು” ಎಂದು ಬಿಜೆಪಿ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿಕೆ ನೀಡಿರುವ ವಿಡಿಯೊವೊಂದು ಬೆಳಕಿಗೆ ಬಂದಿದೆ.

ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕವಾದ ಭಾರತೀಯ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಸದರ್ ಬಜಾರ್ ಘಟಕದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆಂದು ‘ಎಪಿಎನ್‌ಲೈವ್.ಕಾಂ’ ವರದಿ ಮಾಡಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ ಮುಖಂಡರೊಬ್ಬರು ಮಾತನಾಡುವುದನ್ನು, ವಿದ್ಯಾರ್ಥಿ ಘಟಕವನ್ನು ಉದ್ದೇಶಿಸಿ ಅವರು ಘೋಷಣೆಗಳನ್ನು ಕೂಗುವುದನ್ನು ಕಾಣಬಹುದು.

“ಉತ್ತಮ ವಾಗ್ಮಿ ಎಂಬ ಬಗ್ಗೆ ತನಗೆ ಹೆಚ್ಚು ತಿಳಿದಿಲ್ಲ” ಎಂದು ವಿದ್ಯಾರ್ಥಿ ನಾಯಕ ಹೇಳುವುದನ್ನು ಕಾಣಬಹುದು. “ಆದರೆ ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರ ಶಕ್ತಿ ಮತ್ತು ಶ್ರಮಕ್ಕೆ ಸಾಕ್ಷಿಯಾಗಿರುವುದರಿಂದ  ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ” ಎನ್ನುತ್ತಾರೆ.

ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರು ಚುನಾವಣೆ ಗೆಲ್ಲಲು ದೇಹ, ಮನಸ್ಸು, ಹಣ, ಬೇಕಿದ್ದರೆ ಬಂದೂಕು ಬಳಸುತ್ತಾರೆ ಎಂಬ ಮಾತುಗಳನ್ನು ಉಲ್ಲೇಖಿಸುತ್ತಾರೆ. ಈ ಮಾತುಗಳನ್ನು ಯಾರೋ ದೊಡ್ಡ ನಾಯಕರೊಬ್ಬರಿಗೆ ಹೇಳುತ್ತಿರುವಂತೆ ತೋರುತ್ತದೆ. ಆದರೆ ವಿಡಿಯೋದಲ್ಲಿ ಈ ದೊಡ್ಡ ಮುಖಂಡ ಯಾರೆಂಬುದು ದಾಖಲಾಗಿಲ್ಲ.

ಟ್ವಿಟರ್‌ನಲ್ಲಿ ವಿಡಿಯೊ ವೈರಲ್‌: ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ, ಅನೇಕ ಟ್ವಿಟರ್‌ ಬಳಕೆದಾರರು ವಿದ್ಯಾರ್ಥಿ ಮುಖಂಡನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯಾರ್ಥಿ ಮುಖಂಡನ ವಿರುದ್ಧ ಕ್ರಮಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಪರಿಶೀಲಿಸುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದ್ದರೂ, ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಹೊರಬೀಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ತನ್ನ ಘನತೆಯನ್ನು ಉಳಿಸಿಕೊಳ್ಳಲು ಇಂಥವರ ವಿರುದ್ಧ ಕ್ರಮ ಜರುಗಿಸಬೇಕು. ಈ ವಿಚಾರದಲ್ಲಿ ಆಯೋಗ ವಿಫಲವಾದರೆ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೆರಿಫೈ ಮಾಡಲ್ಪಟ್ಟ ಅನೇಕ ಟ್ವಿಟರ್‌ ಖಾತೆದಾರರು ಈ ವಿಡಿಯೊವನ್ನು ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚುನಾವಣೆಯಲ್ಲಿ ಬಂದೂಕು ಬಳಸಬೇಕು ಅಂತ ಹೇಳ್ತಾರೆ…ಆದರೆ ಅದೇ ಬಂದೂಕು ಅವನಿಗೆ ತಿರುಗಿ ಮುಟ್ಟಿದರೆ ಸುಖ ಸುಮ್ಮನೆ ಅವನೇ ಸಾಯ್ಬೇಕಲ್ಲ…ಹಾಗಾಗಿ ಇಂಥ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು….

  2. “ಬಂದೂಕು ಬಳಸಬೇಕು” ಎಂದು ಹೇಳಿರುವವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...