Homeಕರ್ನಾಟಕಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

ಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಹಲ್ಲೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.

“ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ” ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

“ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ” ಎಂದು ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಮಹಿಳೆಯ ಕೆನ್ನೆಗೆ ಉದ್ದೇಶಪೂರ್ವಕವಾಗಿ ಹೊಡೆದಿರುವಂತೆ ಕಂಡು ಬರುತ್ತಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸೋಮಣ್ಣನವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್‌ ಗೂಂಡೂರಾವ್‌ ಟ್ವೀಟ್ ಮಾಡಿದ್ದು, “ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದಿದ್ದಾರೆ.

“ಅಂದು ಅರವಿಂದ್ ಲಿಂಬಾವಳಿ, ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ, ಎಲ್ಲಿದೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಸರ್ಕಾರ? ಇದೇನಾ ಪ್ರಜಾಪ್ರಭುತ್ವ? ನಿಮ್ಮ ಮನೆಯ ಹೆಣ್ಣುಮಕ್ಕಳ ಮೇಲೂ ಹೀಗೆ ಹಲ್ಲೆ ಮಾಡ್ತೀರಾ? ಇವರ ಪ್ರಕಾರ ಹೆಣ್ಣು ಅಂದ್ರೆ ಏನು?” ಎಂದು ಯುವ ಕರ್ನಾಟಕ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...