Homeಕರ್ನಾಟಕಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

ಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಹಲ್ಲೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.

“ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ” ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

“ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ” ಎಂದು ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಮಹಿಳೆಯ ಕೆನ್ನೆಗೆ ಉದ್ದೇಶಪೂರ್ವಕವಾಗಿ ಹೊಡೆದಿರುವಂತೆ ಕಂಡು ಬರುತ್ತಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸೋಮಣ್ಣನವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್‌ ಗೂಂಡೂರಾವ್‌ ಟ್ವೀಟ್ ಮಾಡಿದ್ದು, “ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದಿದ್ದಾರೆ.

“ಅಂದು ಅರವಿಂದ್ ಲಿಂಬಾವಳಿ, ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ, ಎಲ್ಲಿದೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಸರ್ಕಾರ? ಇದೇನಾ ಪ್ರಜಾಪ್ರಭುತ್ವ? ನಿಮ್ಮ ಮನೆಯ ಹೆಣ್ಣುಮಕ್ಕಳ ಮೇಲೂ ಹೀಗೆ ಹಲ್ಲೆ ಮಾಡ್ತೀರಾ? ಇವರ ಪ್ರಕಾರ ಹೆಣ್ಣು ಅಂದ್ರೆ ಏನು?” ಎಂದು ಯುವ ಕರ್ನಾಟಕ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...