Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...