Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...