Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...