Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...