Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...