Homeಕರ್ನಾಟಕಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.

- Advertisement -
ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ನಡೆದಿದ್ದ ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ಮುಂಭಾಗ ನಡೆಯಲಿದೆ.
ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಈ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಹ ಕರ್ತವ್ಯ ನಿರ್ಲಕ್ಷ್ಯವು ಕೂಡ ಕಾರಣವಾಗಿದ್ದು ಅವರ ಮೇಲೂ ಕ್ರಮ ಜರುಗಿಸಬೇಕು ಮತ್ತು ಕೂಡಲೇ ಸರ್ಕಲ್ ಇನ್ಸ್ ಪೆಕ್ಟರ್ ರವರನ್ನು ವಜಾ ಮಾಡಬೇಕೆಂದ ಹಕ್ಕೊತ್ತಾಯಗಳನ್ನು ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.
ಅಮಾನವೀಯ ಘಟನೆಯ ವಿವರ:
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯ ಎಸ್. ಪ್ರತಾಪ್ ರವರು ಗುಂಡ್ಲುಪೇಟೆ ನಿವಾಸಿಯಾಗಿದ್ದು ಜೂನ್ 2 ರಂದು ಐ.ಎ.ಎಸ್.ಸಿ ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದಾರೆ. ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಹೋಗಬೇಕಾದ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತ ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಜೂನ್ 3ರ ಬೆಳಿಗ್ಗೆ 6 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದಾರೆ. ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ದೇವಾಲಯದಲ್ಲಿ ವಿಗ್ರಹ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ ಥಳಿಸಿದ್ದಲ್ಲದೇ, ಆತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗಳನ್ನು ಹಗ್ಗದಿಂದ ಕಟ್ಟಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೆರವಣಿಗೆಯ ವಿಡಿಯೋ ಕೂಡ ಮಾಡಿ ಕ್ರೌರ್ಯದ ಅಟ್ಟಹಾಸ ಮೆರೆದಿದ್ದಾರೆ.
ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ
ಅಂದಹಾಗೆ ಈ ರೀತಿ ಗುಂಪು ಹಲ್ಲೆ ನಡೆದು, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಇಲಾಖೆ ಯಾವ ಕ್ರಮವನ್ನು ಕೈಗೊಂಡಿಲ್ಲ. ಪೊಲೀಸ್‍ನವರು ಕನಿಷ್ಠ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕಿತ್ತು. ಆದರೆ ಜಿಲ್ಲಾಡಳಿತ ಸೇರಿದಂತ ಪೊಲೀಸ್ ಇಲಾಕೆ ಅದಕ್ಕೂ ತಮಗೂ ಸಂಬಂಧವಿಲ್ಲದ ರೀತಿ ವರ್ತಿಸಿದ್ದಾರೆ. ಅಮಾನವೀಯವಾದ ಘೋರ ಘಟನೆಯೊಂದು ತಮ್ಮ ಜಿಲ್ಲೆಯಲ್ಲಿ ನಡೆದಿದ್ದರೂ ಆರೋಪಿಗಳು ಇನ್ನು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಹಲ್ಲೆಗೊಳಗಾದ ಎಸ್ ಪ್ರತಾಪ್ ಎಂಬುವವರು ಮತ್ತಷ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಭಟನೆಗೆ ಕರೆ
ಇದರಿಂದ ಎಚ್ಚೆತ್ತ ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಇಡೀ ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಹೊರಬೇಕೆಂದು ಆರೋಪಿಸಿ ಜೂನ್ 12 ರಂದು ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಬಳಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು, ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು. ಈ ರೀತಿಯ ಅಮಾನವೀಯ ದೌರ್ಜನ್ಯಗಳು ಹೆಚ್ಚುತ್ತಿರುವುದು ನೋಡಿದರ ಕಾಯ್ದೆಯನ್ನು ಇನ್ನಷ್ಟು ಸಬಲಗೊಳಿಸಬೇಕಿದೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಿಕೃತಿ ಮೆರೆಯುತ್ತಿರುವ ಜಾತಿವಾದಿಗಳಿಗೆ ಸರ್ಕಾರ ಸರಿಯಾಗಿ ಎಚ್ಚರಿಕೆ ಕೊಡಬೇಕಿದೆ. ಇದು ಕೇವಲ ದಲಿತ ಸಂಘಟನೆಗಳು ಮಾತ್ರ ಮಾಡುವ ಪ್ರತಿಭಟನೆಯಲ್ಲ. ಎಲ್ಲಾ ಸಮುದಾಯದ ಮಾನಯವೀಯತೆ ಉಳ್ಳವರು ಇಂತಹ ವಿಕೃತ ಘಟನೆಗಳ ವಿರುದ್ಧ ದನಿಯೆತ್ತಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜನಶಕ್ತಿಯ ಗೌರಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...