Homeಅಂತರಾಷ್ಟ್ರೀಯಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

ಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

- Advertisement -
- Advertisement -

ಪಶ್ಚಿಮ ನೈಜೀರಿಯಾದಲ್ಲಿ ಕ್ಯಾಥೋಲಿಕ್ ವಸತಿ ಶಾಲೆಗೆ ನುಗ್ಗಿದ ಬಂದೂಕುಧಾರಿಗಳು 200ಕ್ಕೂ ಹೆಚ್ಚು ಮಕ್ಕಳನ್ನು ಅಪಹರಿಸಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಅತಿದೊಡ್ಡ ಸಾಮೂಹಿಕ ಅಪಹರಣ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ನೈಜರ್ ರಾಜ್ಯದ ಅಗ್ವಾರಾ ಜಿಲ್ಲೆಯ ಪಾಪಿರಿ ಸಮುದಾಯದ ಸೇಂಟ್ ಮೇರಿಸ್ ಶಾಲೆಯ ಮೇಲೆ ಶುಕ್ರವಾರ (ನವೆಂಬರ್ 21) ಬೆಳಗಿನ ಜಾವ ದಾಳಿ ನಡೆಸಿದ ಬಂದೂಕುಧಾರಿಗಳು 215 ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ ಎಂದು ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​(ಸಿಎಎನ್‌) ತಿಳಿಸಿದೆ.

“ತಾನು ಅಪಹರಣಕ್ಕೊಳಗಾದ ಮಕ್ಕಳ ಪೋಷಕರು ಮತ್ತು ಶಿಕ್ಷಕರ ಕುಟುಂಬಸ್ಥರನ್ನು ಭೇಟಿಯಾಗಿದ್ದು, ಆತಂಕದಲ್ಲಿರುವ ಅವರಿಗೆ ಧೈರ್ಯ ಹೇಳಿದ್ದೇನೆ” ಎಂದು ನೈಜರ್ ರಾಜ್ಯದ ಸಿಎಎನ್‌ ವಕ್ತಾರ ಡೇನಿಯಲ್ ಅಟೋರಿ ಹೇಳಿದ್ದಾರೆ.

ಬೆಳಗಿನ ಜಾವಕ್ಕೂ ಮುನ್ನ ಶಾಲೆಯ ಮೇಲೆ ದಾಳಿ ನಡೆದಿರುವುದನ್ನು ಪೊಲೀಸರು ದೃಢಪಡಿಸಿದ್ದು, ಸೈನಿಕರು ಸೇರಿದಂತೆ ಭದ್ರತಾ ಸಿಬ್ಬಂದಿಯನ್ನು ಶಾಲೆಯ ಬಳಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆ ಇರುವ ಪ್ರದೇಶದಲ್ಲಿ ದುಷ್ಕರ್ಮಿಗಳ ದಾಳಿಯ ಅಪಾಯ ಹೆಚ್ಚಾಗಿದೆ ಎಂಬ ಮಾಹಿತಿ ಸರ್ಕಾರಕ್ಕೆ ಮೊದಲೇ ಇತ್ತು. ಸೇಂಟ್ ಮೇರಿಸ್ ಶಾಲೆಯು ರಾಜ್ಯ ಸರ್ಕಾರಕ್ಕೆ ತಿಳಿಸದೆ, ಸರ್ಕಾರದ ಅನುಮತಿ ಕೂಡ ಪಡೆಯದೆ ತರಗತಿ ಪುನರಾರಂಭಿಸಿದೆ. ಇದರಿಂದ ಮಕ್ಕಳು ಅಪಹರಣಕ್ಕೊಳಗಾಗುವಂತಾಯಿತು ಎಂದು ನೈಜರ್ ರಾಜ್ಯ ಸರ್ಕಾರದ ಕಾರ್ಯದರ್ಶಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಅಪಹರಣದ ಘಟನೆ ಹಿನ್ನೆಲೆ, ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ನೈಜೀರಿಯಾ ಅಧ್ಯಕ್ಷ ಬೋಲಾ ಟಿನುಬು ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ. ಅವರ ಬದಲಾಗಿ ಉಪಾಧ್ಯಕ್ಷ ಕಾಶಿಮ್ ಶೆಟ್ಟಿಮಾ ಅವರನ್ನು ಸಭೆಗೆ ಕಳಿಸಿದ್ದಾರೆ.

ನೈಜೀರಿಯಾದ ಕ್ರೈಸ್ತರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಸೇನಾ ಕಾರ್ಯಾಚರಣೆ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರದ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ ನೈಜೀರಿಯಾ ಸರ್ಕಾರ ಟ್ರಂಪ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿತ್ತು. ಸಶಸ್ತ್ರ ಗುಂಪುಗಳ ದಾಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿರುವವರು ಮತ್ತು ಬಾಧಿತರಾಗುತ್ತಿರುವವರು ಮುಸ್ಲಿಮರೇ ಹೊರತು, ಕ್ರೈಸ್ತರಲ್ಲ ಎಂದಿತ್ತು.

ಟ್ರಂಪ್ ಎಚ್ಚರಿಕೆ ನೀಡಿದ ಬಳಿಕ ಒಂದು ಚರ್ಚ್ ಮೇಲೆ ದಾಳಿ ನಡೆದಿದೆ. ಎರಡನೆಯದಾಗಿ ಶಾಲಾ ಮಕ್ಕಳ ಅಪಹರಣವಾಗಿದೆ. ಈ ಮೂಲಕ ಟ್ರಂಪ್ ಆರೋಪಕ್ಕೆ ಬಲ ಬಂದಂತಾಗಿದೆ.

ನೈಜೀರಿಯಾದಲ್ಲಿ ಕ್ರೈಸ್ತರ ಮೇಲೆ ಉದ್ದೇಶಪೂರ್ವಕ ದಾಳಿ ನಡೆಯುತ್ತಿದೆ ಎಂಬುವುದು ಅಮೆರಿಕದ ಬಲಪಂಥೀಯ ಮತ್ತು ಕ್ರೈಸ್ತ ಎವಾಂಜೆಲಿಕಲ್ (ತೀವ್ರ ಧಾರ್ಮಿಕ ಪ್ರಚಾರಕ) ಗುಂಪುಗಳ ವಾದವಾಗಿದೆ. ಅದನ್ನೇ ಟ್ರಂಪ್ ಪ್ರತಿಧ್ವನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...