Homeಅಂತರಾಷ್ಟ್ರೀಯಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

ಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

- Advertisement -
- Advertisement -

ಪಶ್ಚಿಮ ನೈಜೀರಿಯಾದಲ್ಲಿ ಕ್ಯಾಥೋಲಿಕ್ ವಸತಿ ಶಾಲೆಗೆ ನುಗ್ಗಿದ ಬಂದೂಕುಧಾರಿಗಳು 200ಕ್ಕೂ ಹೆಚ್ಚು ಮಕ್ಕಳನ್ನು ಅಪಹರಿಸಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಅತಿದೊಡ್ಡ ಸಾಮೂಹಿಕ ಅಪಹರಣ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ನೈಜರ್ ರಾಜ್ಯದ ಅಗ್ವಾರಾ ಜಿಲ್ಲೆಯ ಪಾಪಿರಿ ಸಮುದಾಯದ ಸೇಂಟ್ ಮೇರಿಸ್ ಶಾಲೆಯ ಮೇಲೆ ಶುಕ್ರವಾರ (ನವೆಂಬರ್ 21) ಬೆಳಗಿನ ಜಾವ ದಾಳಿ ನಡೆಸಿದ ಬಂದೂಕುಧಾರಿಗಳು 215 ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ ಎಂದು ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​(ಸಿಎಎನ್‌) ತಿಳಿಸಿದೆ.

“ತಾನು ಅಪಹರಣಕ್ಕೊಳಗಾದ ಮಕ್ಕಳ ಪೋಷಕರು ಮತ್ತು ಶಿಕ್ಷಕರ ಕುಟುಂಬಸ್ಥರನ್ನು ಭೇಟಿಯಾಗಿದ್ದು, ಆತಂಕದಲ್ಲಿರುವ ಅವರಿಗೆ ಧೈರ್ಯ ಹೇಳಿದ್ದೇನೆ” ಎಂದು ನೈಜರ್ ರಾಜ್ಯದ ಸಿಎಎನ್‌ ವಕ್ತಾರ ಡೇನಿಯಲ್ ಅಟೋರಿ ಹೇಳಿದ್ದಾರೆ.

ಬೆಳಗಿನ ಜಾವಕ್ಕೂ ಮುನ್ನ ಶಾಲೆಯ ಮೇಲೆ ದಾಳಿ ನಡೆದಿರುವುದನ್ನು ಪೊಲೀಸರು ದೃಢಪಡಿಸಿದ್ದು, ಸೈನಿಕರು ಸೇರಿದಂತೆ ಭದ್ರತಾ ಸಿಬ್ಬಂದಿಯನ್ನು ಶಾಲೆಯ ಬಳಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆ ಇರುವ ಪ್ರದೇಶದಲ್ಲಿ ದುಷ್ಕರ್ಮಿಗಳ ದಾಳಿಯ ಅಪಾಯ ಹೆಚ್ಚಾಗಿದೆ ಎಂಬ ಮಾಹಿತಿ ಸರ್ಕಾರಕ್ಕೆ ಮೊದಲೇ ಇತ್ತು. ಸೇಂಟ್ ಮೇರಿಸ್ ಶಾಲೆಯು ರಾಜ್ಯ ಸರ್ಕಾರಕ್ಕೆ ತಿಳಿಸದೆ, ಸರ್ಕಾರದ ಅನುಮತಿ ಕೂಡ ಪಡೆಯದೆ ತರಗತಿ ಪುನರಾರಂಭಿಸಿದೆ. ಇದರಿಂದ ಮಕ್ಕಳು ಅಪಹರಣಕ್ಕೊಳಗಾಗುವಂತಾಯಿತು ಎಂದು ನೈಜರ್ ರಾಜ್ಯ ಸರ್ಕಾರದ ಕಾರ್ಯದರ್ಶಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಅಪಹರಣದ ಘಟನೆ ಹಿನ್ನೆಲೆ, ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ನೈಜೀರಿಯಾ ಅಧ್ಯಕ್ಷ ಬೋಲಾ ಟಿನುಬು ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ. ಅವರ ಬದಲಾಗಿ ಉಪಾಧ್ಯಕ್ಷ ಕಾಶಿಮ್ ಶೆಟ್ಟಿಮಾ ಅವರನ್ನು ಸಭೆಗೆ ಕಳಿಸಿದ್ದಾರೆ.

ನೈಜೀರಿಯಾದ ಕ್ರೈಸ್ತರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಸೇನಾ ಕಾರ್ಯಾಚರಣೆ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರದ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ ನೈಜೀರಿಯಾ ಸರ್ಕಾರ ಟ್ರಂಪ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿತ್ತು. ಸಶಸ್ತ್ರ ಗುಂಪುಗಳ ದಾಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿರುವವರು ಮತ್ತು ಬಾಧಿತರಾಗುತ್ತಿರುವವರು ಮುಸ್ಲಿಮರೇ ಹೊರತು, ಕ್ರೈಸ್ತರಲ್ಲ ಎಂದಿತ್ತು.

ಟ್ರಂಪ್ ಎಚ್ಚರಿಕೆ ನೀಡಿದ ಬಳಿಕ ಒಂದು ಚರ್ಚ್ ಮೇಲೆ ದಾಳಿ ನಡೆದಿದೆ. ಎರಡನೆಯದಾಗಿ ಶಾಲಾ ಮಕ್ಕಳ ಅಪಹರಣವಾಗಿದೆ. ಈ ಮೂಲಕ ಟ್ರಂಪ್ ಆರೋಪಕ್ಕೆ ಬಲ ಬಂದಂತಾಗಿದೆ.

ನೈಜೀರಿಯಾದಲ್ಲಿ ಕ್ರೈಸ್ತರ ಮೇಲೆ ಉದ್ದೇಶಪೂರ್ವಕ ದಾಳಿ ನಡೆಯುತ್ತಿದೆ ಎಂಬುವುದು ಅಮೆರಿಕದ ಬಲಪಂಥೀಯ ಮತ್ತು ಕ್ರೈಸ್ತ ಎವಾಂಜೆಲಿಕಲ್ (ತೀವ್ರ ಧಾರ್ಮಿಕ ಪ್ರಚಾರಕ) ಗುಂಪುಗಳ ವಾದವಾಗಿದೆ. ಅದನ್ನೇ ಟ್ರಂಪ್ ಪ್ರತಿಧ್ವನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...