Homeಅಂತರಾಷ್ಟ್ರೀಯಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

ಶಾಲೆಗೆ ನುಗ್ಗಿದ ಬಂದೂಕುಧಾರಿಗಳು : 200ಕ್ಕೂ ಹೆಚ್ಚು ಮಕ್ಕಳ ಅಪಹರಣ

- Advertisement -
- Advertisement -

ಪಶ್ಚಿಮ ನೈಜೀರಿಯಾದಲ್ಲಿ ಕ್ಯಾಥೋಲಿಕ್ ವಸತಿ ಶಾಲೆಗೆ ನುಗ್ಗಿದ ಬಂದೂಕುಧಾರಿಗಳು 200ಕ್ಕೂ ಹೆಚ್ಚು ಮಕ್ಕಳನ್ನು ಅಪಹರಿಸಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಅತಿದೊಡ್ಡ ಸಾಮೂಹಿಕ ಅಪಹರಣ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ನೈಜರ್ ರಾಜ್ಯದ ಅಗ್ವಾರಾ ಜಿಲ್ಲೆಯ ಪಾಪಿರಿ ಸಮುದಾಯದ ಸೇಂಟ್ ಮೇರಿಸ್ ಶಾಲೆಯ ಮೇಲೆ ಶುಕ್ರವಾರ (ನವೆಂಬರ್ 21) ಬೆಳಗಿನ ಜಾವ ದಾಳಿ ನಡೆಸಿದ ಬಂದೂಕುಧಾರಿಗಳು 215 ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ ಎಂದು ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​(ಸಿಎಎನ್‌) ತಿಳಿಸಿದೆ.

“ತಾನು ಅಪಹರಣಕ್ಕೊಳಗಾದ ಮಕ್ಕಳ ಪೋಷಕರು ಮತ್ತು ಶಿಕ್ಷಕರ ಕುಟುಂಬಸ್ಥರನ್ನು ಭೇಟಿಯಾಗಿದ್ದು, ಆತಂಕದಲ್ಲಿರುವ ಅವರಿಗೆ ಧೈರ್ಯ ಹೇಳಿದ್ದೇನೆ” ಎಂದು ನೈಜರ್ ರಾಜ್ಯದ ಸಿಎಎನ್‌ ವಕ್ತಾರ ಡೇನಿಯಲ್ ಅಟೋರಿ ಹೇಳಿದ್ದಾರೆ.

ಬೆಳಗಿನ ಜಾವಕ್ಕೂ ಮುನ್ನ ಶಾಲೆಯ ಮೇಲೆ ದಾಳಿ ನಡೆದಿರುವುದನ್ನು ಪೊಲೀಸರು ದೃಢಪಡಿಸಿದ್ದು, ಸೈನಿಕರು ಸೇರಿದಂತೆ ಭದ್ರತಾ ಸಿಬ್ಬಂದಿಯನ್ನು ಶಾಲೆಯ ಬಳಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆ ಇರುವ ಪ್ರದೇಶದಲ್ಲಿ ದುಷ್ಕರ್ಮಿಗಳ ದಾಳಿಯ ಅಪಾಯ ಹೆಚ್ಚಾಗಿದೆ ಎಂಬ ಮಾಹಿತಿ ಸರ್ಕಾರಕ್ಕೆ ಮೊದಲೇ ಇತ್ತು. ಸೇಂಟ್ ಮೇರಿಸ್ ಶಾಲೆಯು ರಾಜ್ಯ ಸರ್ಕಾರಕ್ಕೆ ತಿಳಿಸದೆ, ಸರ್ಕಾರದ ಅನುಮತಿ ಕೂಡ ಪಡೆಯದೆ ತರಗತಿ ಪುನರಾರಂಭಿಸಿದೆ. ಇದರಿಂದ ಮಕ್ಕಳು ಅಪಹರಣಕ್ಕೊಳಗಾಗುವಂತಾಯಿತು ಎಂದು ನೈಜರ್ ರಾಜ್ಯ ಸರ್ಕಾರದ ಕಾರ್ಯದರ್ಶಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಅಪಹರಣದ ಘಟನೆ ಹಿನ್ನೆಲೆ, ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ನೈಜೀರಿಯಾ ಅಧ್ಯಕ್ಷ ಬೋಲಾ ಟಿನುಬು ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ. ಅವರ ಬದಲಾಗಿ ಉಪಾಧ್ಯಕ್ಷ ಕಾಶಿಮ್ ಶೆಟ್ಟಿಮಾ ಅವರನ್ನು ಸಭೆಗೆ ಕಳಿಸಿದ್ದಾರೆ.

ನೈಜೀರಿಯಾದ ಕ್ರೈಸ್ತರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಸೇನಾ ಕಾರ್ಯಾಚರಣೆ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರದ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ ನೈಜೀರಿಯಾ ಸರ್ಕಾರ ಟ್ರಂಪ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿತ್ತು. ಸಶಸ್ತ್ರ ಗುಂಪುಗಳ ದಾಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿರುವವರು ಮತ್ತು ಬಾಧಿತರಾಗುತ್ತಿರುವವರು ಮುಸ್ಲಿಮರೇ ಹೊರತು, ಕ್ರೈಸ್ತರಲ್ಲ ಎಂದಿತ್ತು.

ಟ್ರಂಪ್ ಎಚ್ಚರಿಕೆ ನೀಡಿದ ಬಳಿಕ ಒಂದು ಚರ್ಚ್ ಮೇಲೆ ದಾಳಿ ನಡೆದಿದೆ. ಎರಡನೆಯದಾಗಿ ಶಾಲಾ ಮಕ್ಕಳ ಅಪಹರಣವಾಗಿದೆ. ಈ ಮೂಲಕ ಟ್ರಂಪ್ ಆರೋಪಕ್ಕೆ ಬಲ ಬಂದಂತಾಗಿದೆ.

ನೈಜೀರಿಯಾದಲ್ಲಿ ಕ್ರೈಸ್ತರ ಮೇಲೆ ಉದ್ದೇಶಪೂರ್ವಕ ದಾಳಿ ನಡೆಯುತ್ತಿದೆ ಎಂಬುವುದು ಅಮೆರಿಕದ ಬಲಪಂಥೀಯ ಮತ್ತು ಕ್ರೈಸ್ತ ಎವಾಂಜೆಲಿಕಲ್ (ತೀವ್ರ ಧಾರ್ಮಿಕ ಪ್ರಚಾರಕ) ಗುಂಪುಗಳ ವಾದವಾಗಿದೆ. ಅದನ್ನೇ ಟ್ರಂಪ್ ಪ್ರತಿಧ್ವನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...