Homeಮುಖಪುಟಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

ಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

- Advertisement -
- Advertisement -

ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ ಗುರ್‌ಗಾಂವ್‌ನಲ್ಲಿ ಬಲಪಂಥೀಯ ಕಾರ್ಯಕರ್ತರು ಇಂದು(ಶುಕ್ರವಾರ) ಮತ್ತೆ ಮುಸ್ಲಿಮರು ಶುಕ್ರವಾರದ ನಮಾಜ್‌ ಮಾಡುವುದಕ್ಕೆ ಅಡ್ಡಿಪಡಿಸಿದ್ದಾರೆ. ಶುಕ್ರವಾರದ ನಮಾಜ್‌ಗೆ ಸರ್ಕಾರ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡದಂತೆ ತಡೆಯಲು ಬಂದ ಸುಮಾರು ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಐವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ಸೆಕ್ಟರ್ 37 ರ ನಮಾಜ್ ಸೈಟ್‌ನಲ್ಲಿ ನಡೆದ ಘಟನೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬಲಪಂಥೀಯ ಕಾರ್ಯಕರ್ತರು ಮುಸ್ಲಿಮರು ನಮಾಜ್‌ ಮಾಡುತ್ತಿದ್ದ ಸ್ಥಳದಿಂದ 30 ಮೀಟರ್‌ಗಿಂತ ಕಡಿಮೆ ಅಂತರದಿಂದ ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗುತ್ತಿರುವುದು ವಿಡಿಯೊದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ:ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಮಾಜ್ ಸ್ಥಳವು ಪೊಲೀಸ್ ಠಾಣೆಗೆ ಸಮೀಪವಿದ್ದರೂ, ಮೈದಾನದಲ್ಲಿ ಭದ್ರತಾ ವ್ಯವಸ್ಥೆಯು ಅಸಮರ್ಪಕವಾಗಿತ್ತು ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಹೇಳಿದೆ. ವಿಡಿಯೊದಲ್ಲಿ, ನಮಾಜ್‌ಗೆ ಅಡ್ಡಿಪಡಿಸದಂತೆ ಪೊಲೀಸರು ಬಲಪಂಥೀಯ ಕಾರ್ಯಕರ್ತರು ತಡೆಯಲು ಪ್ರಯತ್ನಿಸುತ್ತಿರುವುದು ಕಾಣುತ್ತದೆ.

ನಮಾಜ್ ಸೈಟ್‌ನ ಕಡೆಗೆ ನಡೆಯುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಯೊಬ್ಬ ತಡೆಯಲು ಬರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅವನನ್ನು ಕರೆದೊಯ್ದಿದ್ದಾರೆ.

ವರದಿಗಳ ಪ್ರಕಾರ, ಸುಮಾರು 15 ಮುಸ್ಲಿಮರು ಇಂದು ನಮಾಜ್‌ಗಾಗಿ ಮೈದಾನದಲ್ಲಿ ಜಮಾಯಿಸಿ, ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ನಡುವೆಯೆ ಬಲಪಂಥೀಯರು ‘ಜೈ ಶ್ರೀ ರಾಮ್’ ಮತ್ತು ‘ವಂದೇ ಮಾತರಂ’ ಘೋಷಣೆ ಕೂಗಿದ್ದಾರೆ. ಇದಕ್ಕೂ ಮುಂಚೆ ಬೇರೆ ಕಡೆ ತಮ್ಮ ಟ್ರಕ್‌ಗಳನ್ನು ನಿಲ್ಲಿಸಲು ಜಾಗವಿಲ್ಲ ಎಂದು ಹೇಳಿ ಸ್ಥಳೀಯರು ತಮ್ಮ ಟ್ರಕ್‌‌ಗಳನ್ನು ನಮಾಜ್‌ಗೆ ಗೊತ್ತು ಪಡಿಸಿದ್ದ ಮೈದಾನದಲ್ಲಿ ನಿಲ್ಲಿಸಿದ್ದರು.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ನಮಾಜ್‌ ಮಾಡಬಾರದು ಎಂದು ಪ್ರತಿಭಟನೆಗಳು ನಡೆದು ಮೊದಲ ಸುದ್ದಿಯಾದಾಗ ಹರಿಯಾಣ ಮುಖ್ಯಮಂತ್ರಿ ಖಟ್ಟರ್, “ಎಲ್ಲರಿಗೂ ಪ್ರಾರ್ಥನೆ ಮಾಡುವ ಹಕ್ಕಿದೆ. ಆದರೆ ಪ್ರಾರ್ಥನೆ ಮಾಡುವವರು ರಸ್ತೆ ಸಂಚಾರವನ್ನು ನಿರ್ಬಂಧಿಸಬಾರದು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೋಡಲ್ಲಿ ನಮಾಜ್ ಮಾಡಿದರೆ ,ಸಾರ್ವಜನಿಕರ ಬದುಕಿಗೆ ಅಡ್ಡಿ ಮಾಡಿದರೆ ಯಾವುದೇ ಮುಲಾಜಿಲ್ಲದೇ ಅಲ್ಲಿಂದ ನಮಾಜ್ ಮಾಡುವವರ ವಿರುದ್ಧ ಘೋಷಣೆ ಕೂಗದೇ ಇರಲಾರು

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...