Homeಮುಖಪುಟಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

ಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

- Advertisement -
- Advertisement -

ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ ಗುರ್‌ಗಾಂವ್‌ನಲ್ಲಿ ಬಲಪಂಥೀಯ ಕಾರ್ಯಕರ್ತರು ಇಂದು(ಶುಕ್ರವಾರ) ಮತ್ತೆ ಮುಸ್ಲಿಮರು ಶುಕ್ರವಾರದ ನಮಾಜ್‌ ಮಾಡುವುದಕ್ಕೆ ಅಡ್ಡಿಪಡಿಸಿದ್ದಾರೆ. ಶುಕ್ರವಾರದ ನಮಾಜ್‌ಗೆ ಸರ್ಕಾರ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡದಂತೆ ತಡೆಯಲು ಬಂದ ಸುಮಾರು ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಐವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ಸೆಕ್ಟರ್ 37 ರ ನಮಾಜ್ ಸೈಟ್‌ನಲ್ಲಿ ನಡೆದ ಘಟನೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬಲಪಂಥೀಯ ಕಾರ್ಯಕರ್ತರು ಮುಸ್ಲಿಮರು ನಮಾಜ್‌ ಮಾಡುತ್ತಿದ್ದ ಸ್ಥಳದಿಂದ 30 ಮೀಟರ್‌ಗಿಂತ ಕಡಿಮೆ ಅಂತರದಿಂದ ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗುತ್ತಿರುವುದು ವಿಡಿಯೊದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ:ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಮಾಜ್ ಸ್ಥಳವು ಪೊಲೀಸ್ ಠಾಣೆಗೆ ಸಮೀಪವಿದ್ದರೂ, ಮೈದಾನದಲ್ಲಿ ಭದ್ರತಾ ವ್ಯವಸ್ಥೆಯು ಅಸಮರ್ಪಕವಾಗಿತ್ತು ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಹೇಳಿದೆ. ವಿಡಿಯೊದಲ್ಲಿ, ನಮಾಜ್‌ಗೆ ಅಡ್ಡಿಪಡಿಸದಂತೆ ಪೊಲೀಸರು ಬಲಪಂಥೀಯ ಕಾರ್ಯಕರ್ತರು ತಡೆಯಲು ಪ್ರಯತ್ನಿಸುತ್ತಿರುವುದು ಕಾಣುತ್ತದೆ.

ನಮಾಜ್ ಸೈಟ್‌ನ ಕಡೆಗೆ ನಡೆಯುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಯೊಬ್ಬ ತಡೆಯಲು ಬರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅವನನ್ನು ಕರೆದೊಯ್ದಿದ್ದಾರೆ.

ವರದಿಗಳ ಪ್ರಕಾರ, ಸುಮಾರು 15 ಮುಸ್ಲಿಮರು ಇಂದು ನಮಾಜ್‌ಗಾಗಿ ಮೈದಾನದಲ್ಲಿ ಜಮಾಯಿಸಿ, ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ನಡುವೆಯೆ ಬಲಪಂಥೀಯರು ‘ಜೈ ಶ್ರೀ ರಾಮ್’ ಮತ್ತು ‘ವಂದೇ ಮಾತರಂ’ ಘೋಷಣೆ ಕೂಗಿದ್ದಾರೆ. ಇದಕ್ಕೂ ಮುಂಚೆ ಬೇರೆ ಕಡೆ ತಮ್ಮ ಟ್ರಕ್‌ಗಳನ್ನು ನಿಲ್ಲಿಸಲು ಜಾಗವಿಲ್ಲ ಎಂದು ಹೇಳಿ ಸ್ಥಳೀಯರು ತಮ್ಮ ಟ್ರಕ್‌‌ಗಳನ್ನು ನಮಾಜ್‌ಗೆ ಗೊತ್ತು ಪಡಿಸಿದ್ದ ಮೈದಾನದಲ್ಲಿ ನಿಲ್ಲಿಸಿದ್ದರು.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ನಮಾಜ್‌ ಮಾಡಬಾರದು ಎಂದು ಪ್ರತಿಭಟನೆಗಳು ನಡೆದು ಮೊದಲ ಸುದ್ದಿಯಾದಾಗ ಹರಿಯಾಣ ಮುಖ್ಯಮಂತ್ರಿ ಖಟ್ಟರ್, “ಎಲ್ಲರಿಗೂ ಪ್ರಾರ್ಥನೆ ಮಾಡುವ ಹಕ್ಕಿದೆ. ಆದರೆ ಪ್ರಾರ್ಥನೆ ಮಾಡುವವರು ರಸ್ತೆ ಸಂಚಾರವನ್ನು ನಿರ್ಬಂಧಿಸಬಾರದು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೋಡಲ್ಲಿ ನಮಾಜ್ ಮಾಡಿದರೆ ,ಸಾರ್ವಜನಿಕರ ಬದುಕಿಗೆ ಅಡ್ಡಿ ಮಾಡಿದರೆ ಯಾವುದೇ ಮುಲಾಜಿಲ್ಲದೇ ಅಲ್ಲಿಂದ ನಮಾಜ್ ಮಾಡುವವರ ವಿರುದ್ಧ ಘೋಷಣೆ ಕೂಗದೇ ಇರಲಾರು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...