Homeಮುಖಪುಟದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ.

ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಸೆಕ್ಟರ್ 49 ರಲ್ಲಿ ಬೆಂಗಾಲಿ ಬಸ್ತಿ, ಡಿಎಲ್‌ಎಫ್ ಹಂತ -3 ರ ವಿ ಬ್ಲಾಕ್, ಸೂರತ್ ನಗರ ಹಂತ -1, ಖೇರ್ಕಿ ಮಜ್ರಾ ಗ್ರಾಮದ ಹೊರವಲಯ, ದ್ವಾರಕಾ ಎಕ್ಸ್‌ಪ್ರೆಸ್‌ವೇ ಬಳಿಯ ದೌಲತಾಬಾದ್ ಗ್ರಾಮದ ಹೊರವಲಯ, ಸೆಕ್ಟರ್ 68 ರ ರಾಮಗಢ ಗ್ರಾಮದ ಬಳಿ, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ಮತ್ತು ರಾಂಪುರ ಗ್ರಾಮದಿಂದ ನಖ್ರೋಲಾ ರಸ್ತೆ. ಈ ಎಂಟು ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

“ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಅಥವಾ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡಬಹುದು. ಆದರೆ, ಯಾವುದೇ ಸಾರ್ವಜನಿಕ ಮತ್ತು ತೆರೆದ ಸ್ಥಳದಲ್ಲಿ ನಮಾಜ್ ಮಾಡಲು ಆಡಳಿತದ ಒಪ್ಪಿಗೆ ಅಗತ್ಯ. ಒಂದು ವೇಳೆ ಸ್ಥಳೀಯ ಜನರು ಇತರ ಸ್ಥಳಗಳಲ್ಲಿ ನಮಾಜ್ ಮಾಡಲು ಆಕ್ಷೇಪಣೆ ವ್ಯಕ್ತಪಡಿಸಿದರೆ, ಅಲ್ಲಿಯೂ ನಮಾಜ್ ಮಾಡಲು ಅನುಮತಿ ನೀಡಲಾಗುವುದಿಲ್ಲ” ಎಂದು ಆಡಳಿತ ಹೇಳಿದೆ.

ಈ ಕುರಿತು ಚರ್ಚೆ ನಡೆಸಲು ಮತ್ತು ಭವಿಷ್ಯದಲ್ಲಿ ನಮಾಜ್ ಮಾಡಲು ಸ್ಥಳಗಳನ್ನು ಗುರುತಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಪೊಲೀಸ್ ಆಯುಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ಸಿವಿಲ್ ಸೊಸೈಟಿ ಗುಂಪುಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಗುರುಗ್ರಾಮ್ ಡೆಪ್ಯುಟಿ ಕಮಿಷನರ್ ಯಶ್ ಗರ್ಗ್ ಅವರು ರಚಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲಾಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಧಾರ್ಮಿಕ ಸಮುದಾಯಗಳಿಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುಗ್ರಾಮ್ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದಾರೆ. ಈ ಹಿಂದೆ ಹಲವು ಬಾರಿ ಗುರುಗ್ರಾಮ್ ನಿವಾಸಿಗಳು ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರದ ನಮಾಜ್ ಮಾಡುವ ಬಗ್ಗೆ ದೂರು ನೀಡಿದ್ದು, ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...