Homeಚಳವಳಿಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಇಲ್ಲಿದ್ದೇವೆ

- Advertisement -
- Advertisement -

ನಾನು ಪಂಜಾಬಿನಲ್ಲಿ ಸಿಹಿ ತಿನಿಸುಗಳನ್ನು ಮಾರಾಟ ಮಾಡುವ ಹಲವಾಯಿ, ನಮ್ಮದು ಸ್ವಂತ ಅಂಗಡಿಯಿದೆ. ನಾನು ನನ್ನ ಸಹೋದರರು ಅಂಗಡಿ ಮೇಲ್ವಿಚಾರಣೆ ನೋಡಿಕೊಳ್ಳುತ್ತೆವೆ. ಈಗ ನಮಗೆ ನಮ್ಮ ಅಂಗಡಿಗಳ ಬಗ್ಗೆ ಚಿಂತೆಯಿಲ್ಲ, ರೈತರು ಮತ್ತು ಅವರ ಹಕ್ಕುಗಳ ರಕ್ಷಣೆಯೆ ಮುಖ್ಯ. ಹಾಗಾಗಿ ನಾವು ಇಲ್ಲಿ ಸೇವೆ ನೀಡಲು ಬಂದಿದ್ದೇವೆ ಎನ್ನುತ್ತಾರೆ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಚಹಾ ಸೇವೆ ನೀಡುತ್ತಿರುವ ಗುರ್‌ನಾಮ್ ಸಿಂಗ್.

ಪಂಜಾಬಿನ ಗುರ್‌ನಾಮ್ ಸಿಂಗ್, ಟಿಕ್ರಿ ಗಡಿಯಲ್ಲಿ ಕಳೆದ ಡಿಸೆಂಬರ್ ಐದನೇ ತಾರೀಖಿನಿಂದ ಸೇವೆ ಎಂದುಕೊಂಡು ಪ್ರತಿಭಟನಾ ನಿರತರಿಗೆ ಮತ್ತು ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಟೀ ಸರಬರಾಜು ಮಾಡುತ್ತಿದ್ದಾರೆ. ಎರಡು ದೊಡ್ಡ ಪಾತ್ರೆಗಳಲ್ಲಿ ಬೆಳಗ್ಗೆ ನಾಲ್ಕು ಗಂಟೆಗೆ ಟೀ ಮಾಡಲು ಶುರು ಮಾಡುವ ಇವರು ನಿರಂತರವಾಗಿ ರಾತ್ರಿ 9 ಗಂಟೆಯವರೆಗೆ ಟೀ ತಯಾರಿಸುತ್ತಾರೆ.

ಇದನ್ನೂ ಓದಿ: ರೈತರಿಗೆ ಕೊರೊನಾ ಸಾಂಕ್ರಮಿಕದಿಂದ ರಕ್ಷಣೆ ನೀಡಲಾಗಿದೆಯೆ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಟೀ ತಯಾರಿಸಲು ಬೇಕಾಗುವ ಹಾಲು ಪಂಜಾಬ್ ಮತ್ತು ಹರಿಯಾಣದ ರೈತರು ಸರಬರಾಜು ಮಾಡುತ್ತಾರೆ. ಟೀ ಪುಡಿ ಮತ್ತು ಸಕ್ಕರೆ ಇಲ್ಲಿಯೇ ಇರುವ ಅನೇಕ ಲಂಗರ್‌ಗಳು ಮತ್ತು ಹಲವು ಸೇವಾ ಸಂಸ್ಥೆಗಳು ನೀಡುತ್ತವೆ. ಸೇವೆ ಮಾಡುವ ಮನಸ್ಸು ಇದ್ದರೇ ಸಾಕು ಎಲ್ಲಾ ಸೌಲಭ್ಯಗಳು ತಾವಾಗಿಯೇ ದೊರೆಯುತ್ತವೆ ಎಂದು ಹೇಳುತ್ತಾರೆ ಗುರುನಾಮ್.

ನಾನು, ನನ್ನ ಸಹೋದರರು ಪಂಜಾಬಿನಲ್ಲಿ ನಮ್ಮ ಕುಟುಂಬನ್ನು ಬಿಟ್ಟು ಇಲ್ಲಿಗೆ ಬಂದಿದ್ದೇವೆ. ಅವರ ಚಿಂತೆ ನಮಗಿಲ್ಲ ಎಂದಲ್ಲ, ಅದಕ್ಕೂ ಹೆಚ್ಚು ರೈತರ ಈಗಿನ ಪರಿಸ್ಥಿತಿಯಲ್ಲಿ ಅವರ ಜೊತೆಗೆ ನಿಲ್ಲುವುದು ನಮ್ಮ ಜವಾಬ್ದಾರಿ. ಅದೆಷ್ಟೇ ದಿನವಾಗಲಿ ನಾವು ರೈತರ ಜೊತೆ ಇರುತ್ತೇವೆ. ಅವರೆ ಇಲ್ಲ ಎಂದರೆ ದೇಶ ಉಳಿಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸುತ್ತಾರೆ.

ಚಳಿ, ಮಳೆ ಹೆಚ್ಚಾಗಿದೆ ಇಂತಹ ಸ್ಥಿತಿಯಲ್ಲೂ ಕಿಸಾನ್ ಹಿಂದೆ ಸರಿಯುತ್ತಿಲ್ಲ. ನಾವು ರೈತರ ಮಕ್ಕಳು, ಅವರ ನೋವು ನಮ್ಮ ನೋವು ಒಂದೇ. ಚಳಿ ಹೆಚ್ಚಾದಾಗ ಒಂದು ಲೋಟ ಚಹ ಕೂಡ ಕೊಂಚ ನೆಮ್ಮದಿ ನೀಡಬಲ್ಲದು. ಹಾಗಾಗಿ ಈ ಸೇವೆ ಸಲ್ಲಿಸುತ್ತಿದ್ದೆನೆ. ನನ್ನ ಸಹೋದರರು ಇಬ್ಬರು ಅಡುಗೆ ಮಾಡಿ ಬಡಿಸುತ್ತಿದ್ದಾರೆ. ಅವರದ್ದು ಮತ್ತೊಂದು ರೀತಿಯ ಸೇವೆ. ಮೋದಿ ಸರ್ಕಾರ ನಮ್ಮ ಮಾತುಗಳನ್ನು ಕೇಳಬೇಕು. ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗುರ್‌ನಾಮ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...