Homeಚಳವಳಿಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಇಲ್ಲಿದ್ದೇವೆ

- Advertisement -
- Advertisement -

ನಾನು ಪಂಜಾಬಿನಲ್ಲಿ ಸಿಹಿ ತಿನಿಸುಗಳನ್ನು ಮಾರಾಟ ಮಾಡುವ ಹಲವಾಯಿ, ನಮ್ಮದು ಸ್ವಂತ ಅಂಗಡಿಯಿದೆ. ನಾನು ನನ್ನ ಸಹೋದರರು ಅಂಗಡಿ ಮೇಲ್ವಿಚಾರಣೆ ನೋಡಿಕೊಳ್ಳುತ್ತೆವೆ. ಈಗ ನಮಗೆ ನಮ್ಮ ಅಂಗಡಿಗಳ ಬಗ್ಗೆ ಚಿಂತೆಯಿಲ್ಲ, ರೈತರು ಮತ್ತು ಅವರ ಹಕ್ಕುಗಳ ರಕ್ಷಣೆಯೆ ಮುಖ್ಯ. ಹಾಗಾಗಿ ನಾವು ಇಲ್ಲಿ ಸೇವೆ ನೀಡಲು ಬಂದಿದ್ದೇವೆ ಎನ್ನುತ್ತಾರೆ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಚಹಾ ಸೇವೆ ನೀಡುತ್ತಿರುವ ಗುರ್‌ನಾಮ್ ಸಿಂಗ್.

ಪಂಜಾಬಿನ ಗುರ್‌ನಾಮ್ ಸಿಂಗ್, ಟಿಕ್ರಿ ಗಡಿಯಲ್ಲಿ ಕಳೆದ ಡಿಸೆಂಬರ್ ಐದನೇ ತಾರೀಖಿನಿಂದ ಸೇವೆ ಎಂದುಕೊಂಡು ಪ್ರತಿಭಟನಾ ನಿರತರಿಗೆ ಮತ್ತು ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಟೀ ಸರಬರಾಜು ಮಾಡುತ್ತಿದ್ದಾರೆ. ಎರಡು ದೊಡ್ಡ ಪಾತ್ರೆಗಳಲ್ಲಿ ಬೆಳಗ್ಗೆ ನಾಲ್ಕು ಗಂಟೆಗೆ ಟೀ ಮಾಡಲು ಶುರು ಮಾಡುವ ಇವರು ನಿರಂತರವಾಗಿ ರಾತ್ರಿ 9 ಗಂಟೆಯವರೆಗೆ ಟೀ ತಯಾರಿಸುತ್ತಾರೆ.

ಇದನ್ನೂ ಓದಿ: ರೈತರಿಗೆ ಕೊರೊನಾ ಸಾಂಕ್ರಮಿಕದಿಂದ ರಕ್ಷಣೆ ನೀಡಲಾಗಿದೆಯೆ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಟೀ ತಯಾರಿಸಲು ಬೇಕಾಗುವ ಹಾಲು ಪಂಜಾಬ್ ಮತ್ತು ಹರಿಯಾಣದ ರೈತರು ಸರಬರಾಜು ಮಾಡುತ್ತಾರೆ. ಟೀ ಪುಡಿ ಮತ್ತು ಸಕ್ಕರೆ ಇಲ್ಲಿಯೇ ಇರುವ ಅನೇಕ ಲಂಗರ್‌ಗಳು ಮತ್ತು ಹಲವು ಸೇವಾ ಸಂಸ್ಥೆಗಳು ನೀಡುತ್ತವೆ. ಸೇವೆ ಮಾಡುವ ಮನಸ್ಸು ಇದ್ದರೇ ಸಾಕು ಎಲ್ಲಾ ಸೌಲಭ್ಯಗಳು ತಾವಾಗಿಯೇ ದೊರೆಯುತ್ತವೆ ಎಂದು ಹೇಳುತ್ತಾರೆ ಗುರುನಾಮ್.

ನಾನು, ನನ್ನ ಸಹೋದರರು ಪಂಜಾಬಿನಲ್ಲಿ ನಮ್ಮ ಕುಟುಂಬನ್ನು ಬಿಟ್ಟು ಇಲ್ಲಿಗೆ ಬಂದಿದ್ದೇವೆ. ಅವರ ಚಿಂತೆ ನಮಗಿಲ್ಲ ಎಂದಲ್ಲ, ಅದಕ್ಕೂ ಹೆಚ್ಚು ರೈತರ ಈಗಿನ ಪರಿಸ್ಥಿತಿಯಲ್ಲಿ ಅವರ ಜೊತೆಗೆ ನಿಲ್ಲುವುದು ನಮ್ಮ ಜವಾಬ್ದಾರಿ. ಅದೆಷ್ಟೇ ದಿನವಾಗಲಿ ನಾವು ರೈತರ ಜೊತೆ ಇರುತ್ತೇವೆ. ಅವರೆ ಇಲ್ಲ ಎಂದರೆ ದೇಶ ಉಳಿಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸುತ್ತಾರೆ.

ಚಳಿ, ಮಳೆ ಹೆಚ್ಚಾಗಿದೆ ಇಂತಹ ಸ್ಥಿತಿಯಲ್ಲೂ ಕಿಸಾನ್ ಹಿಂದೆ ಸರಿಯುತ್ತಿಲ್ಲ. ನಾವು ರೈತರ ಮಕ್ಕಳು, ಅವರ ನೋವು ನಮ್ಮ ನೋವು ಒಂದೇ. ಚಳಿ ಹೆಚ್ಚಾದಾಗ ಒಂದು ಲೋಟ ಚಹ ಕೂಡ ಕೊಂಚ ನೆಮ್ಮದಿ ನೀಡಬಲ್ಲದು. ಹಾಗಾಗಿ ಈ ಸೇವೆ ಸಲ್ಲಿಸುತ್ತಿದ್ದೆನೆ. ನನ್ನ ಸಹೋದರರು ಇಬ್ಬರು ಅಡುಗೆ ಮಾಡಿ ಬಡಿಸುತ್ತಿದ್ದಾರೆ. ಅವರದ್ದು ಮತ್ತೊಂದು ರೀತಿಯ ಸೇವೆ. ಮೋದಿ ಸರ್ಕಾರ ನಮ್ಮ ಮಾತುಗಳನ್ನು ಕೇಳಬೇಕು. ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗುರ್‌ನಾಮ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...