Homeಚಳವಳಿಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಇಲ್ಲಿದ್ದೇವೆ

- Advertisement -
- Advertisement -

ನಾನು ಪಂಜಾಬಿನಲ್ಲಿ ಸಿಹಿ ತಿನಿಸುಗಳನ್ನು ಮಾರಾಟ ಮಾಡುವ ಹಲವಾಯಿ, ನಮ್ಮದು ಸ್ವಂತ ಅಂಗಡಿಯಿದೆ. ನಾನು ನನ್ನ ಸಹೋದರರು ಅಂಗಡಿ ಮೇಲ್ವಿಚಾರಣೆ ನೋಡಿಕೊಳ್ಳುತ್ತೆವೆ. ಈಗ ನಮಗೆ ನಮ್ಮ ಅಂಗಡಿಗಳ ಬಗ್ಗೆ ಚಿಂತೆಯಿಲ್ಲ, ರೈತರು ಮತ್ತು ಅವರ ಹಕ್ಕುಗಳ ರಕ್ಷಣೆಯೆ ಮುಖ್ಯ. ಹಾಗಾಗಿ ನಾವು ಇಲ್ಲಿ ಸೇವೆ ನೀಡಲು ಬಂದಿದ್ದೇವೆ ಎನ್ನುತ್ತಾರೆ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಚಹಾ ಸೇವೆ ನೀಡುತ್ತಿರುವ ಗುರ್‌ನಾಮ್ ಸಿಂಗ್.

ಪಂಜಾಬಿನ ಗುರ್‌ನಾಮ್ ಸಿಂಗ್, ಟಿಕ್ರಿ ಗಡಿಯಲ್ಲಿ ಕಳೆದ ಡಿಸೆಂಬರ್ ಐದನೇ ತಾರೀಖಿನಿಂದ ಸೇವೆ ಎಂದುಕೊಂಡು ಪ್ರತಿಭಟನಾ ನಿರತರಿಗೆ ಮತ್ತು ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಟೀ ಸರಬರಾಜು ಮಾಡುತ್ತಿದ್ದಾರೆ. ಎರಡು ದೊಡ್ಡ ಪಾತ್ರೆಗಳಲ್ಲಿ ಬೆಳಗ್ಗೆ ನಾಲ್ಕು ಗಂಟೆಗೆ ಟೀ ಮಾಡಲು ಶುರು ಮಾಡುವ ಇವರು ನಿರಂತರವಾಗಿ ರಾತ್ರಿ 9 ಗಂಟೆಯವರೆಗೆ ಟೀ ತಯಾರಿಸುತ್ತಾರೆ.

ಇದನ್ನೂ ಓದಿ: ರೈತರಿಗೆ ಕೊರೊನಾ ಸಾಂಕ್ರಮಿಕದಿಂದ ರಕ್ಷಣೆ ನೀಡಲಾಗಿದೆಯೆ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಟೀ ತಯಾರಿಸಲು ಬೇಕಾಗುವ ಹಾಲು ಪಂಜಾಬ್ ಮತ್ತು ಹರಿಯಾಣದ ರೈತರು ಸರಬರಾಜು ಮಾಡುತ್ತಾರೆ. ಟೀ ಪುಡಿ ಮತ್ತು ಸಕ್ಕರೆ ಇಲ್ಲಿಯೇ ಇರುವ ಅನೇಕ ಲಂಗರ್‌ಗಳು ಮತ್ತು ಹಲವು ಸೇವಾ ಸಂಸ್ಥೆಗಳು ನೀಡುತ್ತವೆ. ಸೇವೆ ಮಾಡುವ ಮನಸ್ಸು ಇದ್ದರೇ ಸಾಕು ಎಲ್ಲಾ ಸೌಲಭ್ಯಗಳು ತಾವಾಗಿಯೇ ದೊರೆಯುತ್ತವೆ ಎಂದು ಹೇಳುತ್ತಾರೆ ಗುರುನಾಮ್.

ನಾನು, ನನ್ನ ಸಹೋದರರು ಪಂಜಾಬಿನಲ್ಲಿ ನಮ್ಮ ಕುಟುಂಬನ್ನು ಬಿಟ್ಟು ಇಲ್ಲಿಗೆ ಬಂದಿದ್ದೇವೆ. ಅವರ ಚಿಂತೆ ನಮಗಿಲ್ಲ ಎಂದಲ್ಲ, ಅದಕ್ಕೂ ಹೆಚ್ಚು ರೈತರ ಈಗಿನ ಪರಿಸ್ಥಿತಿಯಲ್ಲಿ ಅವರ ಜೊತೆಗೆ ನಿಲ್ಲುವುದು ನಮ್ಮ ಜವಾಬ್ದಾರಿ. ಅದೆಷ್ಟೇ ದಿನವಾಗಲಿ ನಾವು ರೈತರ ಜೊತೆ ಇರುತ್ತೇವೆ. ಅವರೆ ಇಲ್ಲ ಎಂದರೆ ದೇಶ ಉಳಿಯುವುದಾದರೂ ಹೇಗೆ ಎಂದು ಅವರು ಪ್ರಶ್ನಿಸುತ್ತಾರೆ.

ಚಳಿ, ಮಳೆ ಹೆಚ್ಚಾಗಿದೆ ಇಂತಹ ಸ್ಥಿತಿಯಲ್ಲೂ ಕಿಸಾನ್ ಹಿಂದೆ ಸರಿಯುತ್ತಿಲ್ಲ. ನಾವು ರೈತರ ಮಕ್ಕಳು, ಅವರ ನೋವು ನಮ್ಮ ನೋವು ಒಂದೇ. ಚಳಿ ಹೆಚ್ಚಾದಾಗ ಒಂದು ಲೋಟ ಚಹ ಕೂಡ ಕೊಂಚ ನೆಮ್ಮದಿ ನೀಡಬಲ್ಲದು. ಹಾಗಾಗಿ ಈ ಸೇವೆ ಸಲ್ಲಿಸುತ್ತಿದ್ದೆನೆ. ನನ್ನ ಸಹೋದರರು ಇಬ್ಬರು ಅಡುಗೆ ಮಾಡಿ ಬಡಿಸುತ್ತಿದ್ದಾರೆ. ಅವರದ್ದು ಮತ್ತೊಂದು ರೀತಿಯ ಸೇವೆ. ಮೋದಿ ಸರ್ಕಾರ ನಮ್ಮ ಮಾತುಗಳನ್ನು ಕೇಳಬೇಕು. ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರಿಗಾಗಿ ಮಾತ್ರವಲ್ಲ, ಇಡೀ ದೇಶದ ರೈತರಿಗಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗುರ್‌ನಾಮ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...