Homeಕರ್ನಾಟಕಗುರು ರಾಘವೇಂದ್ರ ಬ್ಯಾಂಕ್ ಹಗರಣ: ಠೇವಣಿದಾರರ ಮೇಲೆ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ಹಲ್ಲೆ ಆರೋಪ

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಠೇವಣಿದಾರರ ಮೇಲೆ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ಹಲ್ಲೆ ಆರೋಪ

- Advertisement -
- Advertisement -

ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಹಣ ಕಳೆದುಕೊಂಡಿರುವ ಠೇವಣಿದಾರರ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ತೇಜಸ್ವಿ ಸೂರ್ಯ ಕರೆದ ಸಭೆಯಲ್ಲೇ ಅವರ ವಿರುದ್ಧವೇ ಬ್ಯಾಂಕ್‌ ಠೇವಣಿದಾರರು ಆಕ್ರೋಶ ಹೊರ ಹಾಕಿದ್ದಾರೆ. ಗದ್ದಲ ಹೆಚ್ಚಾಗುತ್ತಿದ್ದಂತೆ ತೇಜಸ್ವಿ ಸೂರ್ಯ ಕೋಪಗೊಂಡು, ಸಭೆಯಿಂದ ಎದ್ದು ಹೊರ ನಡೆಯಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ತಡೆದವರನ್ನು ತಳ್ಳಿ ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸ್ಥಳದಲ್ಲಿದ್ದ ಚುನಾವಣಾ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿದ್ದಾರೆ. ವಾಗ್ವಾದದ ವೇಳೆ ಶಾಸಕ ರವಿ ಸುಬ್ರಮಣ್ಯ ಗ್ರಾಹಕರೊಬ್ಬರನ್ನು ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ.

‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಮತ್ತೊಮ್ಮೆ ಎಸ್ಕೇಪ್ : ಕಾಂಗ್ರೆಸ್ ವ್ಯಂಗ್ಯ

ಘಟನೆ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವಿಡಿಯೋ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ. ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ. ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದಿದೆ.

ಇದನ್ನೂ ಓದಿ : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...