Homeಕರ್ನಾಟಕಗುರು ರಾಘವೇಂದ್ರ ಬ್ಯಾಂಕ್ ಹಗರಣ: ಠೇವಣಿದಾರರ ಮೇಲೆ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ಹಲ್ಲೆ ಆರೋಪ

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಠೇವಣಿದಾರರ ಮೇಲೆ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ಹಲ್ಲೆ ಆರೋಪ

- Advertisement -
- Advertisement -

ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಹಣ ಕಳೆದುಕೊಂಡಿರುವ ಠೇವಣಿದಾರರ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ತೇಜಸ್ವಿ ಸೂರ್ಯ ಕರೆದ ಸಭೆಯಲ್ಲೇ ಅವರ ವಿರುದ್ಧವೇ ಬ್ಯಾಂಕ್‌ ಠೇವಣಿದಾರರು ಆಕ್ರೋಶ ಹೊರ ಹಾಕಿದ್ದಾರೆ. ಗದ್ದಲ ಹೆಚ್ಚಾಗುತ್ತಿದ್ದಂತೆ ತೇಜಸ್ವಿ ಸೂರ್ಯ ಕೋಪಗೊಂಡು, ಸಭೆಯಿಂದ ಎದ್ದು ಹೊರ ನಡೆಯಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ತಡೆದವರನ್ನು ತಳ್ಳಿ ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸ್ಥಳದಲ್ಲಿದ್ದ ಚುನಾವಣಾ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿದ್ದಾರೆ. ವಾಗ್ವಾದದ ವೇಳೆ ಶಾಸಕ ರವಿ ಸುಬ್ರಮಣ್ಯ ಗ್ರಾಹಕರೊಬ್ಬರನ್ನು ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ.

‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಮತ್ತೊಮ್ಮೆ ಎಸ್ಕೇಪ್ : ಕಾಂಗ್ರೆಸ್ ವ್ಯಂಗ್ಯ

ಘಟನೆ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವಿಡಿಯೋ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ‘ಎಮರ್ಜೆನ್ಸಿ ಎಕ್ಸಿಟ್ ಡೋರ್’ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ. ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ. ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದಿದೆ.

ಇದನ್ನೂ ಓದಿ : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...