Homeಕರ್ನಾಟಕಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ನಿಮ್ಮ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದ್ದರು.

- Advertisement -
- Advertisement -

ಬೆಂಗಳೂರಿನ ಗುರುರಾಘವೇಂದ್ರ ಕೋ-ಆಪರೇಟಿವ್‌ ಬ್ಯಾಂಕಿನ ವಂಚನೆ ಪ್ರಕರಣದ ದೂರು ದಾಖಲಾಗಿ ಎರಡು ವರ್ಷಗಳಾದರೂ, ಗ್ರಾಹಕರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ದೂರಲಾಗಿದೆ. ಜುಲೈ 2 ರ ಶುಕ್ರವಾರದಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬ್ಯಾಂಕ್‌‌ನ ಠೇವಣಿದಾರರು ಭೇಟಿ ಮಾಡಿದ್ದರು. ಈ ವೇಳೆ ನ್ಯಾಯ ಕೊಡಿಸುವಂತೆ ಅವರಲ್ಲಿ ಕೇಳಿಕೊಂಡಾಗ ‘‘ನನ್ನನ್ನು ಕೇಳಿ ಹಣ ಇಟ್ಟಿದ್ದೀರಾ” ಎಂದು ಉಡಾಫೆಯಿಂದ ಮಾತನಾಡಿದರು ಎಂದು ಠೇವಣಿದಾರ ಹರೀಶ್ ಸೋಮವಾರ ಆರೋಪಿಸಿದ್ದಾರೆ.

ಕೆಪಿಸಿಸಿ ವೈದ್ಯಕೀಯ ಘಟಕದ ಕಾರ್ಯದರ್ಶಿ ಡಾ. ಶಂಕರ್‌ ಗುಹಾ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠೇವಣಿದಾರ ಹರೀಶ್‌, “ಸಚಿವೆ ಸೀತಾರಾಮ್‌ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಗುರು ರಾಘವೇ೦ದ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ತಾವು ಹೂಡಿಕೆ ಮಾಡಿದ ಹಣ ಕಳೆದುಕೊಂಡಿರುವ ಬಗ್ಗೆ ಹೇಳಲಾಯಿತು. ಅದಕ್ಕೆ ಅವರು, ನನ್ನನ್ನು ಕೇಳಿ ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ” ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರ್‌ ಗುಹಾ, ‘‘ಈ ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಎರಡು ವರ್ಷಗಳು ಕಳೆದಿವೆ. ಆದರೂ ಠೇವಣಿದಾರರಿಗೆ ನ್ಯಾಯ ಸಿಕ್ಕಿಲ್ಲ. ಹಣ ಕಳೆದುಕೊಂಡ ಕೊರಗಿನಲ್ಲೇ 70 ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆಯಾದರೂ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’’ ಎಂದು ಆಗ್ರಹಿಸಿದ್ದಾರೆ.

“ಬ್ಯಾಂಕಿಗೆ ಸತತವಾಗಿ ‘ಎ’ ದರ್ಜೆಯ ಪ್ರಮಾಣ ಪತ್ರ ನೀಡಲಾಗಿದೆ. ಇಂತಹ ವಂಚಕ ಬ್ಯಾಂಕ್‌ಗೆ ಆರ್‌ಬಿಐ ಈ ಪ್ರಮಾಣಪತ್ರ ನೀಡಿದ್ದಾದರೂ ಹೇಗೆ? ವಿವಿಧ ಕಡೆ ಶಾಖಾ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸಂಸದರನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಸದರು ಹಾಗೂ ಶಾಸಕರಿಂದ ಸಮಸ್ಯೆಗೆ ಪರಿಹಾರ ಸಿಗುವುದು ಕಷ್ಟ. ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು. ಇದೇ 14 ರಂದು ಆಡಿಟ್‌ ವರದಿ ನೀಡುವುದಾಗಿ ಹೇಳಿದ್ದಾರೆ. ಕೊಡದಿದ್ದರೆ ‘ಆರ್‌ಬಿಐ ಚಲೋ’ ಅಭಿಯಾನ ಹಮ್ಮಿಕೊಳ್ಳುತ್ತೇವೆ” ಎಂದು ಶಂಕರ್‌‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಪ್ರಕರಣ ಸಂಬಂಧ ಕಳೆದ ವರ್ಷದ ಜನವರಿಯಲ್ಲಿ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ಅವರಿಗೆ ನಾನು ಭರವಸೆ ನೀಡುತ್ತೇನೆ. ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕರಣದ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ, ಜೊತೆಗೆ ವೈಯಕ್ತಿಕವಾಗಿ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಕಾಳಜಿಗೆ ಕೃತಜ್ಞತೆಗಳು” ಎಂದು ಹೇಳಿದ್ದರು.

ಇದಾಗಿ ಒಂದೂವರೆ ವರ್ಷ ಕಳೆದರೂ ಪ್ರಕರಣವು ಯಾವುದೇ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ಜುಲೈ 2 ರ ಶುಕ್ರವಾರದಂದು ಠೇವಣಿದಾರರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ವಿನಂತಿಸಿದ್ದರು. “ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾದ ಅಗತ್ಯವಿದ್ದು, ಆಡಳಿತಾಧಿಕಾರಿ ಆರ್‌ಬಿಐಗೆ ವರದಿ ಸಲ್ಲಿಸಿದ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ನನ್ನಿಂದಾದ ಪ್ರಯತ್ನವನ್ನು ಖಂಡಿತಾ ಮಾಡುತ್ತೇನೆ” ಹೇಳಿದ್ದರು.

ಬ್ಯಾಂಕಿನ ಒಟ್ಟು 25 ಸಾವಿರ ಮಂದಿ ಹಣ ಕಳೆದುಕೊಂಡಿದ್ದು, 2,130 ಕೋಟಿಗೂ ಅಧಿಕ ಹಣ ವಂಚನೆ ನಡೆಸಿದೆ ಎಂದು ಹೇಳಲಾಗಿದೆ. ಈ ಹಗರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಗೌಡ ಅವರ ಪಾತ್ರವು ಇದೆ ಎಂದು ಆರೋಪಿಸಲಾಗಿದ್ದು, ಅವರು ಕೂಡಾ ಬ್ಯಾಂಕಿಗೆ 12 ಕೋಟಿ ಬಾಕಿ ಕಟ್ಟಬೇಕಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಬ್ಯಾಂಕಿನ ಆಡಿಟ್‌ ನಡೆಲಿದ್ದು, ಅದರ ವರದಿ ಬರಬೇಕಿದೆ. ಆದ್ದರಿಂದ ವಹಿವಾಟು ಆರು ತಿಂಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಠೇವಣಿದಾರರು ತಮ್ಮ ಹಣವನ್ನು ಬ್ಯಾಂಕಿನಿಂದ ತೆಗೆಯಲು ಆಗುತ್ತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...